ಕೊಡಗು

ಮಡಿಕೇರಿಯಲ್ಲಿ : ನೋಡುಗರ ಮೈನವಿರೇಳಿಸಿದ ಬೈಕ್ ಸ್ಟಂಟ್ಸ್

ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ ಸೈಕಲ್ ಜಾಥದ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು. ಬಳಿಕ ಗಾಂಧಿ ಮೈದಾನದಲ್ಲಿ ನಡೆದ ಬೈಕ್ ಸ್ಟಂಟ್ ಹಾಗೂ ಸೂಪರ್ ಬೈಕ್‌ಗಳ ರ‍್ಯಾಲಿ ನೋಡುಗರ ಮೈನವಿರೇಳಿಸಿತು. ಯುವಕರು ವಿವಿಧ ಕಸರತ್ತಿನ ಮೂಲಕ ಮಿಂಚಿನ ವೇಗದಲ್ಲಿ ಬೈಕ್ ಚಲಾಯಿಸಿ ಎದೆ ಝಲ್ ಎನ್ನುವಂತೆ ಮಾಡಿದರು.

ಫ್ರೀಸ್ಟೈಲ್, ಸ್ಟಾಪಿ, ವೀಲಿಂಗ್, ಡ್ರಿಫ್ಟ್ ಸೇರಿದಂತೆ ನಾನಾ ರೀತಿಯ ಸ್ಟಂಟ್‌ಗಳನ್ನು ಮಾಡುವ ಮೂಲಕ ಯುವಕರು ಪ್ರೇಕ್ಷಕರ ಕಣ್ಮನ ಸೆಳೆದರು. ಇದರ ಜೋತೆಗೆ ಸೂಪರ್ ಬೈಕ್‌ಗಳು ಕೂಡ ಬೂಮ್ ಬೂಮ್ ಸೌಂಡ್ ಮಾಡುತ್ತಾ ಮಡಿಕೇರಿ ನಗರದಲ್ಲಿ ಒಂದು ರೌಂಡ್ಸ್ ಹಾಕಿದವು. ಸೂಪರ್ ಬೈಕ್‌ಗಳಾದ ಆರ್‌ಓನ್ 5, ವಾಸಕಿ ನಿಂಜ, ಬೆನಿಲಿ 600, ಡುಕಾಟಿ ಹೈಪರ್, ಆರ್‌ಎಕ್ಸ್, ಜಾವ ಬೈಕ್ ಸೇರಿದಂತೆ ಸೂಪರ್ ಬೈಕ್ ಗಳು ಮಡಿಕೇರಿಗರು ಕಣ್ಣು ಬಿಟ್ಟು ನೋಡುವಂತೆ ಮಾಡಿತ್ತು.

lokesh

Recent Posts

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

3 mins ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

14 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

14 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

15 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

15 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

15 hours ago