ಕೊಡಗು

ಮಡಿಕೇರಿಯಲ್ಲಿ : ನೋಡುಗರ ಮೈನವಿರೇಳಿಸಿದ ಬೈಕ್ ಸ್ಟಂಟ್ಸ್

ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ ಸೈಕಲ್ ಜಾಥದ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಯಿತು. ಬಳಿಕ ಗಾಂಧಿ ಮೈದಾನದಲ್ಲಿ ನಡೆದ ಬೈಕ್ ಸ್ಟಂಟ್ ಹಾಗೂ ಸೂಪರ್ ಬೈಕ್‌ಗಳ ರ‍್ಯಾಲಿ ನೋಡುಗರ ಮೈನವಿರೇಳಿಸಿತು. ಯುವಕರು ವಿವಿಧ ಕಸರತ್ತಿನ ಮೂಲಕ ಮಿಂಚಿನ ವೇಗದಲ್ಲಿ ಬೈಕ್ ಚಲಾಯಿಸಿ ಎದೆ ಝಲ್ ಎನ್ನುವಂತೆ ಮಾಡಿದರು.

ಫ್ರೀಸ್ಟೈಲ್, ಸ್ಟಾಪಿ, ವೀಲಿಂಗ್, ಡ್ರಿಫ್ಟ್ ಸೇರಿದಂತೆ ನಾನಾ ರೀತಿಯ ಸ್ಟಂಟ್‌ಗಳನ್ನು ಮಾಡುವ ಮೂಲಕ ಯುವಕರು ಪ್ರೇಕ್ಷಕರ ಕಣ್ಮನ ಸೆಳೆದರು. ಇದರ ಜೋತೆಗೆ ಸೂಪರ್ ಬೈಕ್‌ಗಳು ಕೂಡ ಬೂಮ್ ಬೂಮ್ ಸೌಂಡ್ ಮಾಡುತ್ತಾ ಮಡಿಕೇರಿ ನಗರದಲ್ಲಿ ಒಂದು ರೌಂಡ್ಸ್ ಹಾಕಿದವು. ಸೂಪರ್ ಬೈಕ್‌ಗಳಾದ ಆರ್‌ಓನ್ 5, ವಾಸಕಿ ನಿಂಜ, ಬೆನಿಲಿ 600, ಡುಕಾಟಿ ಹೈಪರ್, ಆರ್‌ಎಕ್ಸ್, ಜಾವ ಬೈಕ್ ಸೇರಿದಂತೆ ಸೂಪರ್ ಬೈಕ್ ಗಳು ಮಡಿಕೇರಿಗರು ಕಣ್ಣು ಬಿಟ್ಟು ನೋಡುವಂತೆ ಮಾಡಿತ್ತು.

lokesh

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

57 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

1 hour ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

4 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

7 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

7 hours ago