ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.
ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಭ್ರಾತೃತ್ವ ಬೆಳೆಸಿ, ಭಾರತೀಯರಾಗಿ ಬದುಕಬೇಕು
ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು.
ಕೊಡಿಗಿನ ಅಭಿವೃದ್ಧಿಗೆ ಅನುದಾನ
ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು.
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…