ಕೊಡಗು

ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಭ್ರಾತೃತ್ವ ಬೆಳೆಸಿ, ಭಾರತೀಯರಾಗಿ ಬದುಕಬೇಕು

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು.

ಕೊಡಿಗಿನ ಅಭಿವೃದ್ಧಿಗೆ ಅನುದಾನ

ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

53 mins ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

56 mins ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

1 hour ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

1 hour ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

1 hour ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

2 hours ago