ಕೊಡಗು

ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು.

ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಧರ್ಮಗಳು, ಜನರು, ಜಾತಿಗಳೂ ಕೂಡ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ಹುಟ್ಟುವಾಗ ಎಲ್ಲರೂ ವಿಶ್ವ ಮಾನವರಾಗಿರುತ್ತಾರೆ, ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಹೇಳಿದ್ದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಭ್ರಾತೃತ್ವ ಬೆಳೆಸಿ, ಭಾರತೀಯರಾಗಿ ಬದುಕಬೇಕು

ಕೊಡಗಿನ ಜನ ರಾಜಕೀಯವಾಗಿ ಪ್ರಬುದ್ಧರಾಗಿದ್ದು, ಯಾವ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಯೋಚಿಸಬೇಕು. ಭಾರತ ದೇಶ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು. ಧ್ವೇಷ ಮಾಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದುದು ಎಂದರು.

ಕೊಡಿಗಿನ ಅಭಿವೃದ್ಧಿಗೆ ಅನುದಾನ

ಭಾಗಮಂಡಲದಲ್ಲಿ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ಸಂಗಮವನ್ನು ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರೆ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

4 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

4 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago