ಕೊಡಗು

ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯವನ್ನು ಬಳುವಳಿಯಾಗಿ ನೀಡಿ; ಎ.ಎಸ್.ಪೊನ್ನಣ್ಣ

ಮಡಿಕೇರಿ: ಈಗಿನ ಪ್ರಸ್ತುತ ಸನ್ನಿವೇಶದಲ್ಲಿ ನಾವು ನಮ್ಮ ಮುಂದಿನ ಪೀಳಿಗೆಗೆ ಆಸ್ತಿ, ಅಂತಸ್ತು ಸಂಪಾದಿಸುವದಕ್ಕಿಂತ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ.

ಭಾನುವಾರ ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರುಣಾ ಟ್ರಸ್ಟ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ ಆ್ಯಂಟಿ ಮೈಕ್ರೋಬಿಯಲ್ ಸ್ಟೀವರ್ಡ್ ಶಿಪ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,
ಇಂದಿನ ಪರಿಸ್ಥಿತಿಯಲ್ಲಿ ನಾವುಗಳು ನಮಗರಿಯದೆ ಔಷಧ ಬೆರಸಿದ ಆಹಾರಗಳನ್ನು ಸೇವಿಸುತ್ತಿದ್ದು, ಇದು ವಿಷೇಶವಾಗಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತಿದೆ. ಇಂತಹ ದುಷ್ಪರಿಣಾಮಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಿರುವುದು ಮತ್ತು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಮನುಷ್ಯ ಪರಿಸರಕ್ಕೆ ಹೊಂದಿಕೊಂಡು ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಫ್ಲೋರಿಡಾ ಯುನಿವರ್ಸಿಟಿ ಮೆಡಿಸನ್ ವಿಭಾಗದ ಮುಖ್ಯಸ್ಥರಾದ ಡಾ ಕಲಿಯಾಟಂಡ ಜೀವನ್‌, ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಶಾಸಕ ಪೊನ್ನಣ್ಣ ನವರು ಸಮಯ ನೀಡಿ ಪ್ರೋತ್ಸಾಹ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾಜ ಸೇವಕರು ಕಾರ್ಯಕ್ರಮದ ಆಯೋಜಕರಾದ ಗಣೇಶ್, ಡಾ ನೈರಿನ್ ಶೇಖ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಅಧ್ಯಕ್ಷರಾದ ನವೀನ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಪಂಕಜ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ತೆನ್ನಿರ ಮೈನಾ, ಕರುಣಾ ಟ್ರಸ್ಟ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್, ಕೀಕಿರ ವಸಂತ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು,
ಸ್ವಯಂ ಸೇವಕರು, ಸ್ಥಳೀಯರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

5 mins ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

18 mins ago

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

44 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

3 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

4 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

13 hours ago