ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ಲಾಯರ್ಗೆ ಆರು ತಿಂಗಲ ಕಾಲ ಬಾರ್ ಕೌನ್ಸಿಲ್ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಸರ್ವಜನಾಂಗದ ಒಕ್ಕೂಟ ಬಂದ್ಗೆ ಕರೆ ನೀಡಿದೆ.
ಜಿಲ್ಲೆಯ ಅನುದಾನಿತ ಶಾಲಾ, ಕಾಲೇಜಿಗೆ ರಜೆ ಘೋಷಿಸಿದ್ದರು, ಬಹುತೇಕ ಖಾಸಗಿ ಶಾಲೆಗಳು ಎಂದಿನಂತೆ ತೆರೆದಿವೆ. ವಿವಿಧ ಸಂಘ ಸಂಸ್ಥಗಳು ಬಂದ್ಗೆ ಬೆಂಬಲ ನೀಡಿವೆ. ಇಂದು ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಮಾಡಲಾಗಿತ್ತು.
ಕುಶಾಲನಗರ, ವಿರಾಜಪೇಟೆಯಲ್ಲಿ ಬಂದ್ಗೆ ಉತ್ತಮ ಸ್ಪಂದನೆ ದೊರಕಿದೆ. ನಾಪೋಕ್ಲು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಸೋಮವಾರ ಪೇಟೆ, ಕೊಡ್ಲಿಪೇಟೆಯಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟು ತೆರಿದಿದ್ದು, ಬಸ್ ಸಂಚಾರ ಬೆರಳೆಣಿಕೆಯಲ್ಲಿವೆ. ಮಡಿಕೇರಿಯ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಮುಚ್ಚಿದ್ದು, ಮಾರ್ಕೆಟ್ ಒಳಭಾಗದಲ್ಲಿ ಮಾಂಸದ ಅಂಗಡಿಗಳು ಹಾಗು ಕೆಲವೊಂದು ರೆಸ್ಟೋರೆಂಟ್ ಗಳು ತೆರೆದಿದೆ. ಇನ್ನು ಬೆರಳೆಣಿಕೆಯ ಆಟೋ ರಿಕ್ಷಾ ಸಂಚಾರ ಎಂದಿನಂತಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…