ಮಡಿಕೇರಿ: ಕೊಡಗು ಮೂಲದ ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವುದನ್ನು ಖಂಡಿಸಿ ಸರ್ವ ಜನಾಂಗಗಳ ಒಕ್ಕೂಟದಿಂದ ಇಂದು(ಡಿ.12) ಕರೆ ನೀಡಿರುವ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಥಮ ಮಹಾ ದಂಡನಾಯಕ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅಪಮಾನಿಸಿ ಪೋಸ್ಟ್ ಮಾಡಿದ್ದ ಲಾಯರ್ಗೆ ಆರು ತಿಂಗಲ ಕಾಲ ಬಾರ್ ಕೌನ್ಸಿಲ್ನಿಂದ ಹೊರಗಿಡಲಾಗಿದೆ. ಆದರೆ ಆ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲವಾದರೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಸರ್ವಜನಾಂಗದ ಒಕ್ಕೂಟ ಬಂದ್ಗೆ ಕರೆ ನೀಡಿದೆ.
ಜಿಲ್ಲೆಯ ಅನುದಾನಿತ ಶಾಲಾ, ಕಾಲೇಜಿಗೆ ರಜೆ ಘೋಷಿಸಿದ್ದರು, ಬಹುತೇಕ ಖಾಸಗಿ ಶಾಲೆಗಳು ಎಂದಿನಂತೆ ತೆರೆದಿವೆ. ವಿವಿಧ ಸಂಘ ಸಂಸ್ಥಗಳು ಬಂದ್ಗೆ ಬೆಂಬಲ ನೀಡಿವೆ. ಇಂದು ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಮಾಡಲಾಗಿತ್ತು.
ಕುಶಾಲನಗರ, ವಿರಾಜಪೇಟೆಯಲ್ಲಿ ಬಂದ್ಗೆ ಉತ್ತಮ ಸ್ಪಂದನೆ ದೊರಕಿದೆ. ನಾಪೋಕ್ಲು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಸೋಮವಾರ ಪೇಟೆ, ಕೊಡ್ಲಿಪೇಟೆಯಲ್ಲಿ ಎಂದಿನಂತೆ ಅಂಗಡಿ ಮುಗ್ಗಟ್ಟು ತೆರಿದಿದ್ದು, ಬಸ್ ಸಂಚಾರ ಬೆರಳೆಣಿಕೆಯಲ್ಲಿವೆ. ಮಡಿಕೇರಿಯ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮಳಿಗೆಗಳು ಮುಚ್ಚಿದ್ದು, ಮಾರ್ಕೆಟ್ ಒಳಭಾಗದಲ್ಲಿ ಮಾಂಸದ ಅಂಗಡಿಗಳು ಹಾಗು ಕೆಲವೊಂದು ರೆಸ್ಟೋರೆಂಟ್ ಗಳು ತೆರೆದಿದೆ. ಇನ್ನು ಬೆರಳೆಣಿಕೆಯ ಆಟೋ ರಿಕ್ಷಾ ಸಂಚಾರ ಎಂದಿನಂತಿದೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…