ಕೊಡಗು

ಕೊಡಗಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ.

ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್‌ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಪೂರೈಸುತ್ತಿದೆ. ಮಡಿಕೇರಿ ತಾಲ್ಲೂಕಿನ ಪಾಲೆಮಾಡು ಗ್ರಾಮದ ಬಳಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭವಾಗಿದೆ.

50 ಕೋಟಿ ರೂ ವೆಚ್ಚದಲ್ಲಿ ಮೈದಾನ ನಿರ್ಮಾಣವಾಗುತ್ತಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದ ಮಾದರಿಯಲ್ಲಿ ಈ ಕ್ರೀಡಾಂಗಣ ಕಟ್ಟಲಾಗುತ್ತಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗಿಂತ ತುಸು ದೊಡ್ಡದಾಗಿರಲಿದೆ. ಮೈದಾನ ನಿರ್ಮಾಣಕ್ಕೆ ಜಿಲ್ಲಾಡಳಿತ 12 ಎಕರೆ ಜಾಗ ಸಹ ನೀಡಿದೆ.

ಮೈದಾನ ನಿರ್ಮಾಣದ ಜಾಗದ ಪಕ್ಕದಲ್ಲೇ ಸ್ಮಶಾನವಿದ್ದರಿಂದ ಅಲ್ಲಿನ ಸ್ಥಳಿಯರು ಮೈದಾನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹಿಂದಿನ ಜಿಲ್ಲಾಧಿಕಾರಿ ಡಾ. ಬಿಸಿ ಸತೀಶ್‌ ಶಾಂತಿ ಸಭೆ ಕರೆದು ಮೀಸಲಿದ್ದ ಸ್ಮಶಾನಕ್ಕೆ ಒಂದು ಎಕರೆ ಜಮೀನು ನೀಡುವ ಮೂಲಕ ಮೈದಾನ ನಿರ್ಮಾಣಕ್ಕಿದ್ದ ತೊಡಕುಗಳಿಗೆ ತೆರೆ ಎಳೆದಿದ್ದರು.

ಇದೀಗ ನಿರ್ಮಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ಕ್ರೀಡಾಂಗಣ ಸಂಪೂರ್ಣವಾಗಿ ಸಿದ್ದವಾಗಲಿದೆ. ಇದರಿಂದ ಜಿಲ್ಲೆಯ ಸ್ಥಳೀಯ ಕ್ರೀಡಾಪಟುಗಳಿಗೂ ಉಪಯೋಗವಾಗಲಿದೆ.

ಕೊಡಗು ಜಿಲ್ಲೆಯಲ್ಲಿ ಅಸ್ಟ್ರೋ ಟರ್ಫ್‌ ಹಾಕಿ ಕ್ರೀಡಾಂಗಣವಿದೆ. ಆದರೆ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಆಯೋಜಿಸುವಂತಹ ಯಾವುದೇ ಕ್ರೀಡಾಂಗಣವಿಲ್ಲ, ಈ ಮೈದಾನ ನಿರ್ಮಾಣದ ಮುಖಾಂತರ ಜಿಲ್ಲೆಯಲ್ಲಿ ಇನ್ನಿತರ ಕ್ರೀಡೆಗಳ ಕ್ರೀಡಾಗಂಣ ನಿರ್ಮಾಣಕ್ಕೆ ಸಂಸ್ಥೆಗಳು ಒಲವು ತೋರಬೇಕು ಎಂದು ಅಲ್ಲಿನ ಸ್ಥಳೀಯ ಕ್ರೀಡಾಪಟುಗಳು ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

6 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

36 mins ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

43 mins ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

49 mins ago

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

2 hours ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

2 hours ago