ಕೊಡಗು

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್‌ ವಿಚಾರ ಬಂದಾಗ ಯಾರೋ ಗಿಫ್ಟ್‌ ಆಗಿ ಕೊಟ್ಟಿದ್ರು ಎಂದು ಹೇಳಿದ್ದರು. ರಾಜಕಾರಣಿಗಳಾಗಿ ಇಂತಹ ದುಬಾರಿ ಗಿಫ್ಟ್‌ ತಗೊಳ್ಳೋದು ತಪ್ಪು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

ಈ ಕುರಿತು ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಕಾರ್ಟಿಯರ್‌ ವಾಚ್‌ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ಡಿಕೆಶಿ ಅವರು ತಮ್ಮ ವಸ್ತುಗಳು ಏನೇ ಇದ್ದರೂ, ಚುನಾವಣಾ ಸಮಯದಲ್ಲಿ ಅಫಿಡವಿಟ್‌ನಲ್ಲಿ ಡಿಕ್ಲೇರ್‌ ಮಾಡಬೇಕಿತ್ತು. ಹಾಗೇ ಮಾಡಿದ್ದರೆ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.

ಅಲ್ಲದೇ ಈ ಹಿಂದೆ ಸಿದ್ದರಾಮಯ್ಯ ಅವರ ವಿಚೃ ಬಂದಾಗ ಅವರು ತನಗೆ ಯಾರೋ ಗಿಫ್ಟ್‌ ಆಗಿ ಕೊಟ್ಟಿದ್ದು ಎಂದು ಹೇಳಿದ್ದರು. ರಾಜಕಾರಣಿಗಳಾಗಿ, ಮುಖ್ಯಮಂತ್ರಿಗಳಾಗಿ ಇಂತಹ ಗಿಫ್ಟ್‌ಗಳನ್ನು ತೆಗೆದುಕೊಳ್ಳುವುದು ತಪ್ಪಾಗುತ್ತದೆ. ಸಾಮಾನ್ಯವಾಗಿ ಗಿಫ್ಟ್‌ ಕೊಟ್ಟರೆ ಏನೋ ಕೆಲಸಕ್ಕಾಗಿಯೇ ಕೊಟ್ಟಿದ್ದಾರೆ ಎನ್ನುವ ಭಾವನೆ ಬರುತ್ತದೆ. ಹೀಗಾಗಿ ನಾವು ಚುನಾವಣೆ ಸಂದರ್ಭದಲ್ಲಿ ಎಲ್ಲಾ ವಸ್ತುಗಳ ಬಗ್ಗೆ ಡಿಕ್ಲೇರ್‌ ಮಾಡೋದು ಒಳ್ಳೆಯದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

45 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago