ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್ ವಿಚಾರ ಬಂದಾಗ ಯಾರೋ ಗಿಫ್ಟ್ ಆಗಿ ಕೊಟ್ಟಿದ್ರು ಎಂದು ಹೇಳಿದ್ದರು. ರಾಜಕಾರಣಿಗಳಾಗಿ ಇಂತಹ ದುಬಾರಿ ಗಿಫ್ಟ್ ತಗೊಳ್ಳೋದು ತಪ್ಪು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಕಾರ್ಟಿಯರ್ ವಾಚ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಡಿಕೆಶಿ ಅವರು ತಮ್ಮ ವಸ್ತುಗಳು ಏನೇ ಇದ್ದರೂ, ಚುನಾವಣಾ ಸಮಯದಲ್ಲಿ ಅಫಿಡವಿಟ್ನಲ್ಲಿ ಡಿಕ್ಲೇರ್ ಮಾಡಬೇಕಿತ್ತು. ಹಾಗೇ ಮಾಡಿದ್ದರೆ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.
ಅಲ್ಲದೇ ಈ ಹಿಂದೆ ಸಿದ್ದರಾಮಯ್ಯ ಅವರ ವಿಚೃ ಬಂದಾಗ ಅವರು ತನಗೆ ಯಾರೋ ಗಿಫ್ಟ್ ಆಗಿ ಕೊಟ್ಟಿದ್ದು ಎಂದು ಹೇಳಿದ್ದರು. ರಾಜಕಾರಣಿಗಳಾಗಿ, ಮುಖ್ಯಮಂತ್ರಿಗಳಾಗಿ ಇಂತಹ ಗಿಫ್ಟ್ಗಳನ್ನು ತೆಗೆದುಕೊಳ್ಳುವುದು ತಪ್ಪಾಗುತ್ತದೆ. ಸಾಮಾನ್ಯವಾಗಿ ಗಿಫ್ಟ್ ಕೊಟ್ಟರೆ ಏನೋ ಕೆಲಸಕ್ಕಾಗಿಯೇ ಕೊಟ್ಟಿದ್ದಾರೆ ಎನ್ನುವ ಭಾವನೆ ಬರುತ್ತದೆ. ಹೀಗಾಗಿ ನಾವು ಚುನಾವಣೆ ಸಂದರ್ಭದಲ್ಲಿ ಎಲ್ಲಾ ವಸ್ತುಗಳ ಬಗ್ಗೆ ಡಿಕ್ಲೇರ್ ಮಾಡೋದು ಒಳ್ಳೆಯದು ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…