ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಸಲಾಯಿತು.
ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಲೋಕೋಪಯೋಗಿ, ಸೆಸ್ಕ್, ಆರೋಗ್ಯ, ಶಿಕ್ಷಣ, ಪೌರಾಡಳಿತ, ಗಣಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರಿಗೆ ಇದ್ದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದ ಶಾಸಕರು, ಅರ್ಹ ವೃದ್ಧರಿಗೆ ವೃದ್ಧಾಪ್ಯ ವೇತನದ ಪತ್ರಗಳನ್ನು ವಿತರಣೆ ಮಾಡಿದರು. ಅಲ್ಲದೇ ಅರ್ಹ ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಣೆ ಮಾಡಿದರು.
ಜನಸ್ಪಂದನಾ ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಮಂತರ್ ಗೌಡ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರಿ ವ್ಯವಸ್ಥೆಯಲ್ಲಿ ಅಧಿಕಾರಿಗಳು ಇಂದು ಬಂದಿಲ್ಲ, ನಾಳೆ ಬನ್ನಿ, ನೋಡುತ್ತೇವೆ, ಮಾಡಿಕೊಡುತ್ತೇವೆ ಎಂಬ ಸಬೂಬುಗಳು ಬೇಡ. ಕೆಲಸ ಆಗುವುದಿದ್ದಲ್ಲಿ ಕೂಡಲೇ ಮಾಡಿಕೊಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಆಗುವುದಿಲ್ಲ ಎಂದು ಹಿಂಬರಹ ನೀಡಬೇಕು. ಪ್ರತಿ ಕ್ಷೇತ್ರದಲ್ಲಿ ಪಾರದರ್ಶಕತೆ ಇರಬೇಕು ಎಂದು ಎಚ್ಚರಿಕೆ ನೀಡಿದರು.
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…