jcb operators dead body found in river
ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯದ ಬಳಿಕ ಮೃತದೇಹ ಕರಿಕೆಯ ಚಂಬೇರಿಯ ಬಳಿ ಕರಿಕೆ ಹೊಳೆಯಲ್ಲಿ ಪತ್ತೆಯಾಗಿದೆ.
ಮೂಲತಃ ಬೆಳಗಾವಿ ಜಿಲ್ಲೆಯ ದುರ್ಗಪ್ಪ(೧೯) ಎಂಬ ಯುವಕನೇ ಮೃತ ಕಾರ್ಮಿಕ.
ಕೊಡಗು ಜಿಲ್ಲೆಯ ಗಡಿಭಾಗ ಕೇರಳ ರಾಜ್ಯಕ್ಕೆ ಸೇರಿದ ಮಂಞಡ್ಕ ಗ್ರಾಮದಲ್ಲಿ ಗೇರು ತೋಟದ ಕಾಮಗಾರಿಯಲ್ಲಿ ದುರ್ಗಪ್ಪ ತೊಡಗಿಸಿಕೊಂಡಿದ್ದ. ಜು.೧೭ರಂದು ಮಧ್ಯಾಹ್ನ ತಾವು ತಂಗಿದ್ದ ಕರಿಕೆಯ ತೋಟದ ಗ್ರಾಮದ ಮನೆಯಿಂದ ತಮಗೆ ಹಾಗೂ ಕೆಲಸಗಾರರಿಗೆ ಊಟ ತರಲೆಂದು ಬೈಕ್ನಲ್ಲಿ ಬರುತ್ತಿದ್ದ. ಈ ಸಂದರ್ಭ ಮಂಞಡ್ಕ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡು ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದ.
ಬಳಿಕ ಅನಿಲ್ಗಾಗಿ ಕೇರಳ ಅಗ್ನಿಶಾಮಕ, ಪೊಲೀಸ್, ಎನ್.ಡಿ.ಆರ್.ಎಫ್, ಸ್ಥಳೀಯರು ಮೂರು ದಿನಗಳಿಂದ ಹುಟುಕಾಟ ನಡೆಸಿದ್ದರು. ಇದೀಗ ಕರಿಕೆಹೊಳೆಯ ಚಂಬೇರಿ ಎಂಬಲ್ಲಿ ಅನಿಲ್ ಮೃತದೇಹ ಪತ್ತೆಯಾಗಿದೆ.
ಕಾಸರಗೋಡುವಿನ ರಾಜಾಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…