ಕೊಡಗು

ಜೆಸಿಬಿ ಆಪರೇಟರ್ ಶವ ಕರಿಕೆ ಹೊಳೆಯಲ್ಲಿ ಪತ್ತೆ

ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯದ ಬಳಿಕ ಮೃತದೇಹ ಕರಿಕೆಯ ಚಂಬೇರಿಯ ಬಳಿ ಕರಿಕೆ ಹೊಳೆಯಲ್ಲಿ ಪತ್ತೆಯಾಗಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ದುರ್ಗಪ್ಪ(೧೯) ಎಂಬ ಯುವಕನೇ ಮೃತ ಕಾರ್ಮಿಕ.

ಕೊಡಗು ಜಿಲ್ಲೆಯ ಗಡಿಭಾಗ ಕೇರಳ ರಾಜ್ಯಕ್ಕೆ ಸೇರಿದ ಮಂಞಡ್ಕ ಗ್ರಾಮದಲ್ಲಿ ಗೇರು ತೋಟದ ಕಾಮಗಾರಿಯಲ್ಲಿ ದುರ್ಗಪ್ಪ ತೊಡಗಿಸಿಕೊಂಡಿದ್ದ. ಜು.೧೭ರಂದು ಮಧ್ಯಾಹ್ನ ತಾವು ತಂಗಿದ್ದ ಕರಿಕೆಯ ತೋಟದ ಗ್ರಾಮದ ಮನೆಯಿಂದ ತಮಗೆ ಹಾಗೂ ಕೆಲಸಗಾರರಿಗೆ ಊಟ ತರಲೆಂದು ಬೈಕ್‌ನಲ್ಲಿ ಬರುತ್ತಿದ್ದ. ಈ ಸಂದರ್ಭ ಮಂಞಡ್ಕ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡು ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿದ್ದ.

ಬಳಿಕ ಅನಿಲ್‌ಗಾಗಿ ಕೇರಳ ಅಗ್ನಿಶಾಮಕ, ಪೊಲೀಸ್, ಎನ್.ಡಿ.ಆರ್.ಎಫ್, ಸ್ಥಳೀಯರು ಮೂರು ದಿನಗಳಿಂದ ಹುಟುಕಾಟ ನಡೆಸಿದ್ದರು. ಇದೀಗ ಕರಿಕೆಹೊಳೆಯ ಚಂಬೇರಿ ಎಂಬಲ್ಲಿ ಅನಿಲ್ ಮೃತದೇಹ ಪತ್ತೆಯಾಗಿದೆ.
ಕಾಸರಗೋಡುವಿನ ರಾಜಾಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

5 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

6 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

6 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

6 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

8 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

8 hours ago