ಕುಶಾಲನಗರ : ಎಪಿಸಿಎಂಎಸ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳ ವಿಮರ್ಶೆ ಆಗಬೇಕಿದೆ. ಜನಪ್ರತಿನಿಧಿಗಳಿಗೂ ಕೆಲವು ಇತಿಮಿತಿಗಳಿದ್ದು, ಇಂತಹ ಸಂದರ್ಭ ಸಲಹೆ ಸೂಚನೆಗಳ ಅಗತ್ಯತೆ ಇರುತ್ತದೆ. ಪತ್ರಿಕೆ ಮತ್ತು ಮಾಧ್ಯಮಗಳ ಮೂಲಕ ಪತ್ರಕರ್ತರು ಯಾವುದೇ ವಿಷಯಗಳ ಸಾಧಕ ಬಾಧಕಗಳ ಬಗ್ಗೆ ಸಮಾಜಕ್ಕೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಪತ್ರಕರ್ತರ ಕರ್ತವ್ಯಕ್ಕೆ ನಿರ್ಬಂಧ ಸಲ್ಲದು. ಆದರೆ ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರವಹಿಸುವ ಪತ್ರಕರ್ತರು ಕೂಡಾ ಇಂದು ಬೆದರಿಕೆಗಳನ್ನು ಎದುರಿಸುವಂತಾಗಿದ್ದು, ಸರಕಾರ ಅವರ ಜೀವಕ್ಕೆ ಭದ್ರತೆ ಒದಗಿಸಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…