ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾದ ಕೈಲ್ ಪೊಳ್ದ್ ನಮ್ಮೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯಿತು. ಬೆಳಿಗ್ಗೆ ಕುಟುಂಬಸ್ಥರು ಐನ್ ಮನೆಯಲ್ಲಿ ಸೇರಿ ಹಿರಿಯರಿಂದ ಆಶೀರ್ವಾದ ಪಡೆದರು. ಬಳಿಕ ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯ ಅವರು ನೆಲ್ಲಕ್ಕಿ ನಡುಬಾಡೆಯಲ್ಲಿ ಕೋವಿ ಹಾಗೂ ಕತ್ತಿಯನ್ನು ಇರಿಸಿ, ಗುರುಕಾರೋಣನಿಗೆ ಮೀದಿ ನೀರಿಟ್ಟು ಪೂಜೆ ಸಲ್ಲಿಸಿದರು. ಕುಲದೇವರಾದ ಇಗ್ಗುತಪ್ಪ, ಕಾವೇರಮ್ಮ ಹಾಗೂ ಕುಟುಂಬದ ಗುರುಕಾರೋಣರು ಎಲ್ಲರಿಗೂ ಒಳಿತನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ಅಡುಗೆಕೋಣೆಯಲ್ಲಿ ಮಹಿಳೆಯರೂ ಗುರುಕಾರೋಣನಿಗೆ ಮೀದಿ ನೀರಿಟ್ಟು ಪೂಜೆ ಸಲ್ಲಿಸಿದರು. ಹಿರಿಯರಾದ ಪುತ್ತರಿರ ಕಾಶಿ ಸುಬ್ಬಯ್ಯ ಅವರು ಕುಟುಂಬದ ಸದಸ್ಯರಿಗೆ ಆರೋಗ್ಯ, ಐಶ್ವರ್ಯ ಹಾಗೂ ನೆಮ್ಮದಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಕೈಲ್ ಪೊಳ್ದ್ ಅಂಗವಾಗಿ ಕುಟುಂಬಸ್ಥರು ಸಾಂಪ್ರದಾಯಿಕ ಭೋಜನ ಸವಿದರು. ಬಳಿಕ ಹಿರಿಯರು, ಕಿರಿಯರು ಹಾಗೂ ಮಕ್ಕಳು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕೊಡವ ಕೋವಿ ಸಂಸ್ಕೃತಿ ಹಾಗೂ ಶೌರ್ಯವನ್ನು ಪ್ರದರ್ಶಿಸಿದರು.
ಕುಟುಂಬದ ಕಾರ್ಯದರ್ಶಿ ಪುತ್ತರಿರ ಸೀತಮ್ಮ ಮೊಣ್ಣಪ್ಪ ವಂದಿಸಿದರು. ನಂತರ ಊರಿನವರು ಮಂದ್ನಲ್ಲಿ ಸೇರಿ ತೆಂಗಿನಕಾಯಿಗೆ ಗುಂಡು ಹೊಡೆದು ಸಂಭ್ರಮಿಸಿದರು. ಪರಸ್ಪರ ಶುಭಾಶಯ ವಿನಿಮಯದೊಂದಿಗೆ ಕೈಲ್ ಪೊಳ್ದ್ ಆಚರಣೆ ಸೌಹಾರ್ದಯುತವಾಗಿ ಮುಕ್ತಾಯಗೊಂಡಿತು.
ಪುತ್ತರಿರ ಐನ್ ಮನೆಯಲ್ಲಿ ನಡೆದ ಆಚರಣೆ ಮೂಲಕ ಹಿರಿಯರಿಗೆ ಗೌರವ, ಕುಟುಂಬದ ಒಗ್ಗಟ್ಟು ಹಾಗೂ ಕೊಡವ ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲಾಯಿತು.
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…