ಕೊಡಗು

ಕಟ್ಟೆಮಾಡು | ಅರ್ಚಕರ ಮೇಲೆ ಹಲ್ಲೆ ; ಬ್ರಾಹ್ಮಣ ಸಮಾಜ ಖಂಡನೆ

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ.

ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಚ೯ಕ ವಿಘ್ನೇಶ್ ಭಟ್ ಅವರಿಗೆ ಸಾಂತ್ವಾನ ಹೇಳಿ ಅವರ ಕುಟುಂಬಸ್ಥರಿಗೂ ಧೈಯ೯ ತುಂಬಿದರು.

ಘಟನೆಗೆ ಕಾರಣರಾದವರ ವಿರುದ್ದ ತಡ ಮಾಡದೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಬ್ರಾಹ್ಮಣ ಸಮಾಜದ ಪ್ರಮುಖರು ಒತ್ತಾಯ ಮಾಡಿದ್ದಾರೆ.

ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾಯ೯ದಶಿ೯ ಜಗದೀಶ್ ಸೋಮಯಾಜಿ, ಪ್ರಮುಖರಾದ ಬಿ.ಜಿ. ಅನಂತಶಯನ, ಜಿ.ಆರ್. ರವಿಶಂಕರ್, ಅರುಣ್ ಸೋಮಯಾಜಿ , ,ವಕೀಲ ಎಂ.ಎನ್ ಶಶಿಕಾಂತ್ ಹಾಜರಿದ್ದರು.

ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಖಂಡನೆ

ಮೂರ್ನಾಡುವಿನಲ್ಲಿ ಇಂದು ನಡೆದ ಅರ್ಚಕರಾದ ವಿಗ್ನೇಶ್ ಭಟ್ ರವರ ಮೇಲಿನ ಹಲ್ಲೆಯನ್ನು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘವು ತೀವ್ರವಾಗಿ ಖಂಡಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ತೇಜೋವಧೆ ಮಾಡಲು ಶ್ರಮಿಸುತ್ತಿದ್ದಾರೆ. ಬ್ರಾಹ್ಮಣರ ಮೇಲಿನ ಈ ರೀತಿಯ ಹಲ್ಲೆ ವಿಷಾದನೀಯ. ಅವರ ಕುಟುಂಬಕ್ಕೆ ಧೈರ್ಯ ತುಂಬುತ್ತಾ ತಪ್ಪಿತಸ್ಥರನ್ನು ಹುಡುಕಿ ಅವರಿಗೆ ಸೂಕ್ತವಾದ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯವರಲ್ಲಿ ಮನವಿ ಮಾಡುತ್ತೇವೆ ಎಂದು  ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಹಲ್ಲೆ ಖಂಡಿಸಿ ಹೇಳಿಕೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

11 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

17 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

21 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

25 mins ago