ಕೊಡಗು

ಕಟ್ಟೆಮಾಡು | ಅರ್ಚಕರ ಮೇಲೆ ಹಲ್ಲೆ ; ಬ್ರಾಹ್ಮಣ ಸಮಾಜ ಖಂಡನೆ

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ.

ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಅಚ೯ಕ ವಿಘ್ನೇಶ್ ಭಟ್ ಅವರಿಗೆ ಸಾಂತ್ವಾನ ಹೇಳಿ ಅವರ ಕುಟುಂಬಸ್ಥರಿಗೂ ಧೈಯ೯ ತುಂಬಿದರು.

ಘಟನೆಗೆ ಕಾರಣರಾದವರ ವಿರುದ್ದ ತಡ ಮಾಡದೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಬ್ರಾಹ್ಮಣ ಸಮಾಜದ ಪ್ರಮುಖರು ಒತ್ತಾಯ ಮಾಡಿದ್ದಾರೆ.

ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾಯ೯ದಶಿ೯ ಜಗದೀಶ್ ಸೋಮಯಾಜಿ, ಪ್ರಮುಖರಾದ ಬಿ.ಜಿ. ಅನಂತಶಯನ, ಜಿ.ಆರ್. ರವಿಶಂಕರ್, ಅರುಣ್ ಸೋಮಯಾಜಿ , ,ವಕೀಲ ಎಂ.ಎನ್ ಶಶಿಕಾಂತ್ ಹಾಜರಿದ್ದರು.

ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಖಂಡನೆ

ಮೂರ್ನಾಡುವಿನಲ್ಲಿ ಇಂದು ನಡೆದ ಅರ್ಚಕರಾದ ವಿಗ್ನೇಶ್ ಭಟ್ ರವರ ಮೇಲಿನ ಹಲ್ಲೆಯನ್ನು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘವು ತೀವ್ರವಾಗಿ ಖಂಡಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ತೇಜೋವಧೆ ಮಾಡಲು ಶ್ರಮಿಸುತ್ತಿದ್ದಾರೆ. ಬ್ರಾಹ್ಮಣರ ಮೇಲಿನ ಈ ರೀತಿಯ ಹಲ್ಲೆ ವಿಷಾದನೀಯ. ಅವರ ಕುಟುಂಬಕ್ಕೆ ಧೈರ್ಯ ತುಂಬುತ್ತಾ ತಪ್ಪಿತಸ್ಥರನ್ನು ಹುಡುಕಿ ಅವರಿಗೆ ಸೂಕ್ತವಾದ ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖೆಯವರಲ್ಲಿ ಮನವಿ ಮಾಡುತ್ತೇವೆ ಎಂದು  ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಹಲ್ಲೆ ಖಂಡಿಸಿ ಹೇಳಿಕೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago