ಕೊಡಗು

ಕಟ್ಟೆಮಾಡು ದೇವಾಲಯ ವಿವಾದ ಪ್ರಕರಣ: ಜ.14ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ‌ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ‌ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ.

ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ ಆಡಳಿತ ಮಂಡಳಿ ರದ್ದುಗೊಳಿಸಿ ಸರ್ಕಾರದ ಸುಪರ್ದಿಗೆ ಪಡೆಯುವಂತೆ ಅಥವಾ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಒಂದು‌ ಸಮುದಾಯ ಒತ್ತಾಯಿಸಿದರೆ, ಮತ್ತೊಂದೆಡೆ ಈಗ ಇರುವ ಬೈಲಾ ಪ್ರಕಾರ ಎಲ್ಲಾ ಸಮುದಾಯಕ್ಕೂ ಸಮಾನವಾಗಿ ವಸ್ತ್ರಸಂಹಿತೆ ರೂಪಿಸಲಾಗಿದೆ. ಇದನ್ನು ಹೀಗೆ ಮುಂದುವರೆಸಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಜಿಲ್ಲಾಡಳಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದು, ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರೆಸಲಾಗಿದೆ. ಆದರೆ, ಈ ಹಿಂದೆ ದೇವಾಲಯದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದರೆ ಈಗ 200 ಮೀ. ವ್ಯಾಪ್ತಿಯಲ್ಲಿ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ 5 ಜನಕ್ಕಿಂತ ಹೆಚ್ಚಿನ ಜನತೆ ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಪ್ರಚೋಧನಾತ್ಮಕ ಘೋಷಣೆಗೆ ಅವಕಾಶ ಇರುವುದಿಲ್ಲವೆಂದು ಘೋಷಿಸಿ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಆದೇಶ ಹೊರಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

4 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

4 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

5 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

5 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

5 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

6 hours ago