ಕೊಡಗು

ಕಟ್ಟೆಮಾಡು ದೇವಾಲಯ ವಿವಾದ ಪ್ರಕರಣ: ಜ.14ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ‌ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ‌ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ.

ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ ಆಡಳಿತ ಮಂಡಳಿ ರದ್ದುಗೊಳಿಸಿ ಸರ್ಕಾರದ ಸುಪರ್ದಿಗೆ ಪಡೆಯುವಂತೆ ಅಥವಾ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಒಂದು‌ ಸಮುದಾಯ ಒತ್ತಾಯಿಸಿದರೆ, ಮತ್ತೊಂದೆಡೆ ಈಗ ಇರುವ ಬೈಲಾ ಪ್ರಕಾರ ಎಲ್ಲಾ ಸಮುದಾಯಕ್ಕೂ ಸಮಾನವಾಗಿ ವಸ್ತ್ರಸಂಹಿತೆ ರೂಪಿಸಲಾಗಿದೆ. ಇದನ್ನು ಹೀಗೆ ಮುಂದುವರೆಸಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಜಿಲ್ಲಾಡಳಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದು, ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರೆಸಲಾಗಿದೆ. ಆದರೆ, ಈ ಹಿಂದೆ ದೇವಾಲಯದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದರೆ ಈಗ 200 ಮೀ. ವ್ಯಾಪ್ತಿಯಲ್ಲಿ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ 5 ಜನಕ್ಕಿಂತ ಹೆಚ್ಚಿನ ಜನತೆ ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಪ್ರಚೋಧನಾತ್ಮಕ ಘೋಷಣೆಗೆ ಅವಕಾಶ ಇರುವುದಿಲ್ಲವೆಂದು ಘೋಷಿಸಿ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಆದೇಶ ಹೊರಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago