ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ.
ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ ಆಡಳಿತ ಮಂಡಳಿ ರದ್ದುಗೊಳಿಸಿ ಸರ್ಕಾರದ ಸುಪರ್ದಿಗೆ ಪಡೆಯುವಂತೆ ಅಥವಾ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಒಂದು ಸಮುದಾಯ ಒತ್ತಾಯಿಸಿದರೆ, ಮತ್ತೊಂದೆಡೆ ಈಗ ಇರುವ ಬೈಲಾ ಪ್ರಕಾರ ಎಲ್ಲಾ ಸಮುದಾಯಕ್ಕೂ ಸಮಾನವಾಗಿ ವಸ್ತ್ರಸಂಹಿತೆ ರೂಪಿಸಲಾಗಿದೆ. ಇದನ್ನು ಹೀಗೆ ಮುಂದುವರೆಸಬೇಕೆನ್ನುವ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಜಿಲ್ಲಾಡಳಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದು, ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರೆಸಲಾಗಿದೆ. ಆದರೆ, ಈ ಹಿಂದೆ ದೇವಾಲಯದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದರೆ ಈಗ 200 ಮೀ. ವ್ಯಾಪ್ತಿಯಲ್ಲಿ ಮಾತ್ರ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ನಿಷೇಧಿತ ಪ್ರದೇಶದಲ್ಲಿ 5 ಜನಕ್ಕಿಂತ ಹೆಚ್ಚಿನ ಜನತೆ ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಪ್ರಚೋಧನಾತ್ಮಕ ಘೋಷಣೆಗೆ ಅವಕಾಶ ಇರುವುದಿಲ್ಲವೆಂದು ಘೋಷಿಸಿ ಉಪವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಆದೇಶ ಹೊರಡಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…