ಕೊಡಗು: ಕರ್ನಾಟಕದ ಪವಿತ್ರ ನದಿ ಎಂದೇ ಕರೆಯಲ್ಪಡುವ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಿಂದ ಕಾಶಿ ವಿಶ್ವನಾಥನ ಸನ್ನಿಧಿಗೆ ಪವಿತ್ರ ಕಾವೇರಿ ತೀರ್ಥ ಕಳುಹಿಸಲಾಗಿದೆ.
ಕೊಡವ ಜನಾಂಗದ ಒಗ್ಗಟ್ಟು ಹಾಗೂ ಒಳಿತಿಗಾಗಿ ತಲಕಾವೇರಿಯಿಂದ ಪವಿತ್ರ ಕಾವೇರಿ ತೀರ್ಥ ಕಾಶಿ ವಿಶ್ವನಾಥನ ಸನ್ನಿಧಿಗೆ ತಲುಪಿದ್ದು, ಕೊಡವ ದಿರಿಸಿನಲ್ಲಿಯೇ ಕಾಶಿ ವಿಶ್ವನಾಥನಿಗೆ ಅಭಿಷೇಕವಾಗಿರುವುದು ಹೆಮ್ಮೆ ಸಂಗತಿಯಾಗಿದೆ. ಈ ಮೂಲಕ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿ ಕುಟ್ಟೀರ ಸುಬ್ರಮಣಿ ಮಾದಯ್ಯ ಹಾಗೂ ಕೊಡವ ರೈಡರ್ಸ್ ಕ್ಲಬ್ ಸಂಸ್ಥಾಪಕ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸಂಘಟನಾ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರಥ್ವಿ ಸುಬ್ಬಯ್ಯ ಮತ್ತು ಸಂಸಾರ ಇಂದು ಅಯೋಧ್ಯೆಗೂ ತಲುಪಿ ಅಲ್ಲಿ ಬಾಲ ರಾಮನಿಗೆ ಕಾವೇರಿ ತೀರ್ಥವನ್ನು ತಲುಪಿಸಲಿದ್ದಾರೆ.
ಇಂದು ಅಯೋಧ್ಯೆಯಲ್ಲಿ ಬಾಲರಾಮನಿಗೆ ಕಾವೇರಿ ತೀರ್ಥದ ಅಭಿಷೇಕ ಮಾಡಲಿದ್ದು, ಕೊಡವ ಜನಾಂಗದವರು ಇದನ್ನು ಕಣ್ತುಂಬಿಕೊಳ್ಳಲಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…