ಕೊಡಗು

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಕೊಡಗಿನಲ್ಲಿ ಫುಲ್‌ ಟೆನ್ಷನ್‌.. ಟೆನ್ಷನ್.!

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ.

ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. ರೋಗವು ಹರಡುವ ಕಾರಣದಿಂದಾಗಿ ಜಮೀನೊಂದರಲ್ಲಿ 310 ಹಂದಿಗಳನ್ನು ಕೊಲ್ಲಲಾಗಿದೆ.

ನೆರೆ ರಾಜ್ಯದಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗ ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿಯೂ ಆತಂಕ ಸೃಷ್ಟಿಯಾಗಿದೆ.

ಕೊಡಗು ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಯಾಗಿರುವುದರಿಂದ ಕೇರಳದಲ್ಲಿ ಯಾವುದೇ ಸಾಂಕ್ರಾಮಿಕಗಳು ಹರಡಿದರೆ, ಜಿಲ್ಲೆಯಲ್ಲಿ ತಲೆನೋವು ಆರಂಭವಾಗುತ್ತದೆ. ಕೋವಿಡ್‌ ಸೋಂಕು ಸೇರಿದಂತೆ ಪ್ರಾಣಿಗಳಲ್ಲಿ ಕಂಡು ಬರುವ ಹಲವು ಖಾಯಿಲೆಗಳು ಕೇರಳದಿಂದಲೇ ಕೊಡಗಿಗೆ ಕಾಲಿಟ್ಟಿವೆ. ಹೀಗಾಗಿ ಕೇರಳದ ಯಾವುದೇ ಜಿಲ್ಲೆಯಲ್ಲಿ ರೋಗ ಕಂಡು ಬಂದರೂ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಸದ್ಯ ಕೇರಳದ ತ್ರಿಶೂರು ಜಿಲ್ಲೆಯಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಫಾರ್ಮ್‌ನಿಂದ 1 ಕಿ.ಮೀ ವ್ಯಾಪ್ತಿಯ ಎಲ್ಲಾ ಫಾರ್ಮ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಇದಲ್ಲದೇ 10 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ವ್ಯಾಪ್ತಿಯಿಂದ ಹಂದಿಗಳು ಮತ್ತು ಹಂದಿ ಮಾಂಸದ ಸಾಗಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡು ಪಕ್ಕದ ಕಣ್ಣೂರು ಜಿಲ್ಲೆಯವರೆಗೂ ವ್ಯಾಪಿಸಿತ್ತು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಿದ್ದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಹಂದಿ ಸಾಕಣೆದಾರರಿಗೆ ಜಾಗೃತಿ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಲಾಖೆ ಹಮ್ಮಿಕೊಂಡಿದ್ದು, ಇದೀಗ ಕೇರಳದಲ್ಲಿ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಆದೇಶ ಬಂದರೆ ತಕ್ಷಣ ಲಸಿಕೆ ನೀಡಲು ಮುಂದಾಗುವ ಸಾಧ್ಯತೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago