ಕೊಡಗು

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಕೊಡಗಿನಲ್ಲಿ ಫುಲ್‌ ಟೆನ್ಷನ್‌.. ಟೆನ್ಷನ್.!

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ.

ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. ರೋಗವು ಹರಡುವ ಕಾರಣದಿಂದಾಗಿ ಜಮೀನೊಂದರಲ್ಲಿ 310 ಹಂದಿಗಳನ್ನು ಕೊಲ್ಲಲಾಗಿದೆ.

ನೆರೆ ರಾಜ್ಯದಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗ ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿಯೂ ಆತಂಕ ಸೃಷ್ಟಿಯಾಗಿದೆ.

ಕೊಡಗು ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಯಾಗಿರುವುದರಿಂದ ಕೇರಳದಲ್ಲಿ ಯಾವುದೇ ಸಾಂಕ್ರಾಮಿಕಗಳು ಹರಡಿದರೆ, ಜಿಲ್ಲೆಯಲ್ಲಿ ತಲೆನೋವು ಆರಂಭವಾಗುತ್ತದೆ. ಕೋವಿಡ್‌ ಸೋಂಕು ಸೇರಿದಂತೆ ಪ್ರಾಣಿಗಳಲ್ಲಿ ಕಂಡು ಬರುವ ಹಲವು ಖಾಯಿಲೆಗಳು ಕೇರಳದಿಂದಲೇ ಕೊಡಗಿಗೆ ಕಾಲಿಟ್ಟಿವೆ. ಹೀಗಾಗಿ ಕೇರಳದ ಯಾವುದೇ ಜಿಲ್ಲೆಯಲ್ಲಿ ರೋಗ ಕಂಡು ಬಂದರೂ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಸದ್ಯ ಕೇರಳದ ತ್ರಿಶೂರು ಜಿಲ್ಲೆಯಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಫಾರ್ಮ್‌ನಿಂದ 1 ಕಿ.ಮೀ ವ್ಯಾಪ್ತಿಯ ಎಲ್ಲಾ ಫಾರ್ಮ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಇದಲ್ಲದೇ 10 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ವ್ಯಾಪ್ತಿಯಿಂದ ಹಂದಿಗಳು ಮತ್ತು ಹಂದಿ ಮಾಂಸದ ಸಾಗಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡು ಪಕ್ಕದ ಕಣ್ಣೂರು ಜಿಲ್ಲೆಯವರೆಗೂ ವ್ಯಾಪಿಸಿತ್ತು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಿದ್ದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಹಂದಿ ಸಾಕಣೆದಾರರಿಗೆ ಜಾಗೃತಿ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಲಾಖೆ ಹಮ್ಮಿಕೊಂಡಿದ್ದು, ಇದೀಗ ಕೇರಳದಲ್ಲಿ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಆದೇಶ ಬಂದರೆ ತಕ್ಷಣ ಲಸಿಕೆ ನೀಡಲು ಮುಂದಾಗುವ ಸಾಧ್ಯತೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

7 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

8 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

8 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago