ಕೊಡಗು

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಕೊಡಗಿನಲ್ಲಿ ಫುಲ್‌ ಟೆನ್ಷನ್‌.. ಟೆನ್ಷನ್.!

ಕೊಡಗು: ನೆರೆಯ ರಾಜ್ಯ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದ್ದು, ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿ ಫುಲ್‌ ಟೆನ್ಷನ್‌ ಶುರುವಾಗಿದೆ.

ಕೇರಳದ ತ್ರಿಶೂರ್‌ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. 14ನೇ ವಾರ್ಡ್‌ನ ವೆಲಿಯೆಂತರ ಕಟ್ಟಲಪುಳಬಾಬು ಎಂಬುವವರ ಮಾಲೀಕತ್ವದ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. ರೋಗವು ಹರಡುವ ಕಾರಣದಿಂದಾಗಿ ಜಮೀನೊಂದರಲ್ಲಿ 310 ಹಂದಿಗಳನ್ನು ಕೊಲ್ಲಲಾಗಿದೆ.

ನೆರೆ ರಾಜ್ಯದಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗ ರಾಜ್ಯದ ಗಡಿ ಜಿಲ್ಲೆ ಕೊಡಗಿನಲ್ಲಿಯೂ ಆತಂಕ ಸೃಷ್ಟಿಯಾಗಿದೆ.

ಕೊಡಗು ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಯಾಗಿರುವುದರಿಂದ ಕೇರಳದಲ್ಲಿ ಯಾವುದೇ ಸಾಂಕ್ರಾಮಿಕಗಳು ಹರಡಿದರೆ, ಜಿಲ್ಲೆಯಲ್ಲಿ ತಲೆನೋವು ಆರಂಭವಾಗುತ್ತದೆ. ಕೋವಿಡ್‌ ಸೋಂಕು ಸೇರಿದಂತೆ ಪ್ರಾಣಿಗಳಲ್ಲಿ ಕಂಡು ಬರುವ ಹಲವು ಖಾಯಿಲೆಗಳು ಕೇರಳದಿಂದಲೇ ಕೊಡಗಿಗೆ ಕಾಲಿಟ್ಟಿವೆ. ಹೀಗಾಗಿ ಕೇರಳದ ಯಾವುದೇ ಜಿಲ್ಲೆಯಲ್ಲಿ ರೋಗ ಕಂಡು ಬಂದರೂ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಸದ್ಯ ಕೇರಳದ ತ್ರಿಶೂರು ಜಿಲ್ಲೆಯಲ್ಲಿ ಹಂದಿ ಜ್ವರ ಕಾಣಿಸಿಕೊಂಡಿರುವ ಫಾರ್ಮ್‌ನಿಂದ 1 ಕಿ.ಮೀ ವ್ಯಾಪ್ತಿಯ ಎಲ್ಲಾ ಫಾರ್ಮ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಇದಲ್ಲದೇ 10 ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ವ್ಯಾಪ್ತಿಯಿಂದ ಹಂದಿಗಳು ಮತ್ತು ಹಂದಿ ಮಾಂಸದ ಸಾಗಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡು ಪಕ್ಕದ ಕಣ್ಣೂರು ಜಿಲ್ಲೆಯವರೆಗೂ ವ್ಯಾಪಿಸಿತ್ತು. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಿದ್ದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಹಂದಿ ಸಾಕಣೆದಾರರಿಗೆ ಜಾಗೃತಿ ಮೂಡಿಸಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಇಲಾಖೆ ಹಮ್ಮಿಕೊಂಡಿದ್ದು, ಇದೀಗ ಕೇರಳದಲ್ಲಿ ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಆದೇಶ ಬಂದರೆ ತಕ್ಷಣ ಲಸಿಕೆ ನೀಡಲು ಮುಂದಾಗುವ ಸಾಧ್ಯತೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

1 hour ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

5 hours ago