ಕೊಡಗು

ಕೊಡಗು: 7 ಅಂತರಾಷ್ಟ್ರೀಯ ಡ್ರಗ್ ಫೆಡ್ಲರ್ ಗಳ ಬಂಧನ

ಕೊಡಗು ಪೋಲಿಸರ ಯಶಸ್ವಿ ಕಾರ್ಯಾಚರಣೆ
ನಾಪೋಕ್ಲು, ವಿರಾಜಪೇಟೆ ನಿವಾಸಿಗಳೇ ಡ್ರಗ್ ಪೆಡ್ಲರಗಳು

ಮಡಿಕೇರಿ: ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್‌ ಹಾಗೂ ಇತರ ಸಹಚರರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಕೆ. ರಾಮರಾಜನ್ ನೀಡಿದ್ದಾರೆ. ಈ ಕುರಿತು ಸುದ್ದಿ ಇಲ್ಲಿದೆ.

ಬಂದಿತ ಆರೋಪಿಗಳ ವಿವರ
ನಾಪೋಕ್ಲುವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ. ಎಂ, ವಿರಾಜಪೇಟೆಯ ವಾಜಿದ್ ಸಿ.ಇ, ನಾಪೋಕ್ಲುವಿನ ಯಾಹ್ಯ ಸಿ.ಎಚ್, ವಿರಾಜಪೇಟೆಯ ನಾಸೂರುದ್ದೀನ್ ಎಂ. ಯು, ರಾಹುಫ್ ಎಂ. ಎ, ಪ್ರಕರಣದ ಕೇಂದ್ರ ಬಿಂದು ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ. ಎ.

ಪ್ರಕರಣದ ವಿವರ
ಥೈಯ್ಲ್ಯಾಂಡ್ ದೇಶದ ಬ್ಯಾಂಕಾಕ್ ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಒಂದನ್ನು ಇಟ್ಟುಕೊಂಡಿದ್ದು, ಆತನಿಂದ ವಿರಾಜಪೇಟೆಯ ರಾಹುಫ್ ಸೆ.9 ರಂದು ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಹೈಡ್ರೋ ಗಾಂಚವನ್ನು ತಂದಿದ್ದನು. ಬಳಿಕ ಇತರ ಸಹಚಾರರೊಂದಿಗೆ ಮೈಸೂರು ಹಾಗೂ ಗೋಣಿಕೊಪ್ಪಕ್ಕೆ ಬೆಳಗಿನ ಜಾವ ಆಗಮಿಸಿ, ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿ ಯಲ್ಲಿ ಕೆಲವರು ತಂಗಿ ನಂತರ ಇತರ ಸಹಚರು ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದರು.

ಈ ವೇಳೆ ಖಚಿತ ಮಾಹಿತಿ ಅರಿದ ಡಿ.ಸಿ.ಆರ್.ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಅವರ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ಅವರ ತಂಡ ಸೆಪ್ಟೆಂಬರ್ 29ರಂದು ರಾತ್ರಿ 10:30 ಗಂಟೆಗೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ದಂಧೆಯಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹಾಗೂ ವಿರಾಜಪೇಟೆ ತಾಲೂಕಿನ ಆರು ಮಂದಿ ಬಾಗಿಗಳಾಗಿದ್ದು ಕೊಡಗು ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲವರು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದಾರೆ ಎಂಬ ಸಂದೇಹಗಳು ಮೂಡಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಇದೀಗ ಈ ಪ್ರಕರಣ ಆತಂಕ ಮೂಡಲು ಕಾರಣವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

9 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

27 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago