ಕೊಡಗು

ಕೊಡಗು: 7 ಅಂತರಾಷ್ಟ್ರೀಯ ಡ್ರಗ್ ಫೆಡ್ಲರ್ ಗಳ ಬಂಧನ

ಕೊಡಗು ಪೋಲಿಸರ ಯಶಸ್ವಿ ಕಾರ್ಯಾಚರಣೆ
ನಾಪೋಕ್ಲು, ವಿರಾಜಪೇಟೆ ನಿವಾಸಿಗಳೇ ಡ್ರಗ್ ಪೆಡ್ಲರಗಳು

ಮಡಿಕೇರಿ: ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್‌ ಹಾಗೂ ಇತರ ಸಹಚರರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಕೆ. ರಾಮರಾಜನ್ ನೀಡಿದ್ದಾರೆ. ಈ ಕುರಿತು ಸುದ್ದಿ ಇಲ್ಲಿದೆ.

ಬಂದಿತ ಆರೋಪಿಗಳ ವಿವರ
ನಾಪೋಕ್ಲುವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ. ಎಂ, ವಿರಾಜಪೇಟೆಯ ವಾಜಿದ್ ಸಿ.ಇ, ನಾಪೋಕ್ಲುವಿನ ಯಾಹ್ಯ ಸಿ.ಎಚ್, ವಿರಾಜಪೇಟೆಯ ನಾಸೂರುದ್ದೀನ್ ಎಂ. ಯು, ರಾಹುಫ್ ಎಂ. ಎ, ಪ್ರಕರಣದ ಕೇಂದ್ರ ಬಿಂದು ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ. ಎ.

ಪ್ರಕರಣದ ವಿವರ
ಥೈಯ್ಲ್ಯಾಂಡ್ ದೇಶದ ಬ್ಯಾಂಕಾಕ್ ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಒಂದನ್ನು ಇಟ್ಟುಕೊಂಡಿದ್ದು, ಆತನಿಂದ ವಿರಾಜಪೇಟೆಯ ರಾಹುಫ್ ಸೆ.9 ರಂದು ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಹೈಡ್ರೋ ಗಾಂಚವನ್ನು ತಂದಿದ್ದನು. ಬಳಿಕ ಇತರ ಸಹಚಾರರೊಂದಿಗೆ ಮೈಸೂರು ಹಾಗೂ ಗೋಣಿಕೊಪ್ಪಕ್ಕೆ ಬೆಳಗಿನ ಜಾವ ಆಗಮಿಸಿ, ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿ ಯಲ್ಲಿ ಕೆಲವರು ತಂಗಿ ನಂತರ ಇತರ ಸಹಚರು ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದರು.

ಈ ವೇಳೆ ಖಚಿತ ಮಾಹಿತಿ ಅರಿದ ಡಿ.ಸಿ.ಆರ್.ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಅವರ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ಅವರ ತಂಡ ಸೆಪ್ಟೆಂಬರ್ 29ರಂದು ರಾತ್ರಿ 10:30 ಗಂಟೆಗೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ದಂಧೆಯಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹಾಗೂ ವಿರಾಜಪೇಟೆ ತಾಲೂಕಿನ ಆರು ಮಂದಿ ಬಾಗಿಗಳಾಗಿದ್ದು ಕೊಡಗು ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲವರು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದಾರೆ ಎಂಬ ಸಂದೇಹಗಳು ಮೂಡಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಇದೀಗ ಈ ಪ್ರಕರಣ ಆತಂಕ ಮೂಡಲು ಕಾರಣವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago