ಕೊಡಗು

ಕೊಡಗು: 7 ಅಂತರಾಷ್ಟ್ರೀಯ ಡ್ರಗ್ ಫೆಡ್ಲರ್ ಗಳ ಬಂಧನ

ಕೊಡಗು ಪೋಲಿಸರ ಯಶಸ್ವಿ ಕಾರ್ಯಾಚರಣೆ
ನಾಪೋಕ್ಲು, ವಿರಾಜಪೇಟೆ ನಿವಾಸಿಗಳೇ ಡ್ರಗ್ ಪೆಡ್ಲರಗಳು

ಮಡಿಕೇರಿ: ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚಾರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಡ್ರಗ್ ಪೆಡ್ಲರ್‌ ಹಾಗೂ ಇತರ ಸಹಚರರನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ಕೆ. ರಾಮರಾಜನ್ ನೀಡಿದ್ದಾರೆ. ಈ ಕುರಿತು ಸುದ್ದಿ ಇಲ್ಲಿದೆ.

ಬಂದಿತ ಆರೋಪಿಗಳ ವಿವರ
ನಾಪೋಕ್ಲುವಿನ ಅಕಿನಾಸ್ ಎಂ ಎನ್, ರಿಯಾಜ್ ಪಿ. ಎಂ, ವಿರಾಜಪೇಟೆಯ ವಾಜಿದ್ ಸಿ.ಇ, ನಾಪೋಕ್ಲುವಿನ ಯಾಹ್ಯ ಸಿ.ಎಚ್, ವಿರಾಜಪೇಟೆಯ ನಾಸೂರುದ್ದೀನ್ ಎಂ. ಯು, ರಾಹುಫ್ ಎಂ. ಎ, ಪ್ರಕರಣದ ಕೇಂದ್ರ ಬಿಂದು ಕಾಸರಗೋಡು ಜಿಲ್ಲೆಯ ಮೆಹರೂಫ್ ಕೆ. ಎ.

ಪ್ರಕರಣದ ವಿವರ
ಥೈಯ್ಲ್ಯಾಂಡ್ ದೇಶದ ಬ್ಯಾಂಕಾಕ್ ನಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮೆಹರೂಫ್ ಎಂಬಾತ ಕೆಫೆ ಒಂದನ್ನು ಇಟ್ಟುಕೊಂಡಿದ್ದು, ಆತನಿಂದ ವಿರಾಜಪೇಟೆಯ ರಾಹುಫ್ ಸೆ.9 ರಂದು ವಿಮಾನದ ಮೂಲಕ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಹೈಡ್ರೋ ಗಾಂಚವನ್ನು ತಂದಿದ್ದನು. ಬಳಿಕ ಇತರ ಸಹಚಾರರೊಂದಿಗೆ ಮೈಸೂರು ಹಾಗೂ ಗೋಣಿಕೊಪ್ಪಕ್ಕೆ ಬೆಳಗಿನ ಜಾವ ಆಗಮಿಸಿ, ಗೋಣಿಕೊಪ್ಪಲಿನ ಬೆಳ್ಳಿಯಪ್ಪ ರೆಸಿಡೆನ್ಸಿ ಯಲ್ಲಿ ಕೆಲವರು ತಂಗಿ ನಂತರ ಇತರ ಸಹಚರು ಮಡಿಕೇರಿಯತ್ತ ಗಾಂಜಾ ಸಹಿತ ತೆರಳುತ್ತಿದ್ದರು.

ಈ ವೇಳೆ ಖಚಿತ ಮಾಹಿತಿ ಅರಿದ ಡಿ.ಸಿ.ಆರ್.ಬಿ ಪೊಲೀಸ್ ತಂಡ ಜಿಲ್ಲಾ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ.

ಪ್ರಕರಣದ ಮುಖ್ಯ ರೂವಾರಿ ಮೆಹರೂಫ್ ಕೊಚ್ಚಿನ್ ಮೂಲಕ ಬ್ಯಾಂಕಾಕಿಗೆ ವಿಮಾನದ ಮೂಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದಾಗ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪೊಲೀಸ್ ಕಮಿಷನರ್ ಅವರ ಸಹಕಾರದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ಅವರ ತಂಡ ಸೆಪ್ಟೆಂಬರ್ 29ರಂದು ರಾತ್ರಿ 10:30 ಗಂಟೆಗೆ ಬಂಧಿಸಿ ಕೊಡಗಿಗೆ ಕರೆ ತಂದಿದ್ದಾರೆ.

ಅಂತರಾಷ್ಟ್ರೀಯ ಮಟ್ಟದ ಈ ದಂಧೆಯಲ್ಲಿ ಕೊಡಗು ಜಿಲ್ಲೆಯ ನಾಪೋಕ್ಲು ಹಾಗೂ ವಿರಾಜಪೇಟೆ ತಾಲೂಕಿನ ಆರು ಮಂದಿ ಬಾಗಿಗಳಾಗಿದ್ದು ಕೊಡಗು ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲವರು ಬೇರೆ ಬೇರೆ ಚಟುವಟಿಕೆಗಳಲ್ಲಿ ಭಾಗಿಗಳಾಗಿದ್ದಾರೆ ಎಂಬ ಸಂದೇಹಗಳು ಮೂಡಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಇದೀಗ ಈ ಪ್ರಕರಣ ಆತಂಕ ಮೂಡಲು ಕಾರಣವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

12 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

12 hours ago

ಬೊಮ್ಮನದೊಡ್ಡಿ ಬಳಿ ಚಿರತೆ ಸಂಚಾರ: ಗ್ರಾಮಸ್ಥರಲ್ಲಿ ಆತಂಕ

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…

12 hours ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…

13 hours ago

ಅಣ್ಣಾಮಲೈ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್‌ ಪತನಗೊಂಡಿದೆ. ರಾಜ್ಯ…

14 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್‌ ಪಡೆಯಲು ಒಪ್ಪಿದ್ದಾರೆ: ರಣದೀಪ್‌ ಸಿಂಗ್‌ ಸುರ್ಜೇವಾಲ

ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್‌ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌…

14 hours ago