ಕೊಡಗು

ಕೊಡಗು| 5ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ: ಸಂಸದ ಯದುವೀರ್ ಭೇಟಿ

ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್‌ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ.

ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದ ಸುತ್ತಮುತ್ತಲಿನಲ್ಲಿ ಹಲವು ಕುಟುಂಬಗಳು ವಾಸವಾಗಿದ್ದು, ಆ ಜಾಗವನ್ನು ಕಸ ವಿಲೇವಾರಿ ಮಾಡಲು ಗುರುತಿಸಿಲಾಗಿದೆ.

ಇದರಿಂದ ಜನರು ಆಕ್ರೋಶಗೊಂಡು ಕಳೆದ ಐದು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಅಧಿಕಾರಿಗಳು ಸ್ಪಂದಿಸದೇ ಅಸಹಾಯಕತೆ ತೋರುತ್ತಿರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಬೇಡಿಕೆ ಈಡೇರುವರೆಗೂ ಹೋರಾಟ ಮುಂದುವರಿಸುವುದಾಗಿ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಎಚ್ಚರಿಸಿದ್ದಾರೆ.

ಸಂಸದ ಯದುವೀರ್ ಒಡೆಯರ್ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಹೋರಾಟದ ಸಮಸ್ಯೆಗಳನ್ನು ಆಲಿಸಿದರು. ನಂತರ ತ್ಯಾಜ್ಯ ವಿಲೇವಾರಿಗೆ ನಿಗದಿಯಾಗಿರುವ ಸ್ಥಳ ಪರಿಶೀಲನೆ ಮಾಡಿ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ನಂತರ ಮಾತನಾಡಿದ ಅವರು, ಜನವಸತಿ ಪ್ರದೇಶ ತೊಡು ನೀರು ಹರಿಯುವ ಸ್ಥಳ, ಸೆರಿದಂತೆ ಹಲವು ಕಾರಣಗಳಿದ್ದು ತ್ಯಾಜ್ಯ ವಿಲೇವಾರಿಗೆ ಸೂಕ್ತವಾದದ್ದಲ್ಲ. ನಿಯಮಗಳನ್ನ ಮೀರಿ ಮಾಡುವುದು ಸರಿಯಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭ ಭೀಮಪುತ್ರಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಬಿಎಸ್ಪಿ ಉಸ್ತುವಾರಿ ಕಳ್ಳಿರ ಸುರೇಶ್, ಖಜಾಂಚಿ ಸರ ತಂಗಮ್ಮ, ಅಧ್ಯಕ್ಷರು ಉಮೇಶ್ ಉತ್ತಯ್ಯ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

8 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

9 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

9 hours ago