ಕೊಡಗು

ಕೊಡಗು| 5ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ: ಸಂಸದ ಯದುವೀರ್ ಭೇಟಿ

ಕೊಡಗು: ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ವಿರೋಧ ವ್ಯಕ್ತಪಡಿಸಿ ಮಾಲ್ದಾರೆ ಗ್ರಾಮ ಪಂಚಾಯಿತಿ ಮುಂದೆ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ಸ್ಥಳಕ್ಕೆ ಸಂಸದ ಯದುವೀರ್‌ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದಾರೆ.

ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದ ಸುತ್ತಮುತ್ತಲಿನಲ್ಲಿ ಹಲವು ಕುಟುಂಬಗಳು ವಾಸವಾಗಿದ್ದು, ಆ ಜಾಗವನ್ನು ಕಸ ವಿಲೇವಾರಿ ಮಾಡಲು ಗುರುತಿಸಿಲಾಗಿದೆ.

ಇದರಿಂದ ಜನರು ಆಕ್ರೋಶಗೊಂಡು ಕಳೆದ ಐದು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಯಾವುದೇ ಅಧಿಕಾರಿಗಳು ಸ್ಪಂದಿಸದೇ ಅಸಹಾಯಕತೆ ತೋರುತ್ತಿರುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಬೇಡಿಕೆ ಈಡೇರುವರೆಗೂ ಹೋರಾಟ ಮುಂದುವರಿಸುವುದಾಗಿ ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಎಚ್ಚರಿಸಿದ್ದಾರೆ.

ಸಂಸದ ಯದುವೀರ್ ಒಡೆಯರ್ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಹೋರಾಟದ ಸಮಸ್ಯೆಗಳನ್ನು ಆಲಿಸಿದರು. ನಂತರ ತ್ಯಾಜ್ಯ ವಿಲೇವಾರಿಗೆ ನಿಗದಿಯಾಗಿರುವ ಸ್ಥಳ ಪರಿಶೀಲನೆ ಮಾಡಿ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ನಂತರ ಮಾತನಾಡಿದ ಅವರು, ಜನವಸತಿ ಪ್ರದೇಶ ತೊಡು ನೀರು ಹರಿಯುವ ಸ್ಥಳ, ಸೆರಿದಂತೆ ಹಲವು ಕಾರಣಗಳಿದ್ದು ತ್ಯಾಜ್ಯ ವಿಲೇವಾರಿಗೆ ಸೂಕ್ತವಾದದ್ದಲ್ಲ. ನಿಯಮಗಳನ್ನ ಮೀರಿ ಮಾಡುವುದು ಸರಿಯಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭ ಭೀಮಪುತ್ರಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಬಿಎಸ್ಪಿ ಉಸ್ತುವಾರಿ ಕಳ್ಳಿರ ಸುರೇಶ್, ಖಜಾಂಚಿ ಸರ ತಂಗಮ್ಮ, ಅಧ್ಯಕ್ಷರು ಉಮೇಶ್ ಉತ್ತಯ್ಯ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

5 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

7 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

7 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

11 hours ago