ಕೊಡಗು

ಕೊಡಗು | ಕಾಡಾನೆ ದಾಳಿಗೆ ಮತ್ತೊಂದು ಬಲಿ

ಕೊಡಗು : ಜಿಲ್ಲೆಯಲ್ಲಿ ಕಾಡಾನೆ ದಾಳಿ ಮತ್ತೊಂದು ಜೀವ ಬಲಿಯಾಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಅವರು ಕಾಡಾನೆ ದಾಳಿಯಲ್ಲಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ತಿತಿಮತಿ ಸಮೀಪದ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸಲು ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಸಂಧ್ಯಾ ಅವರು ತೆರಳಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಸಂಧ್ಯಾ ಅವರೊಂದಿಗೆ ಇದ್ದ ಇಬ್ಬರು ಕಾರ್ಮಿಕರು ಆನೆಯನ್ನು ಕಂಡ ತಕ್ಷಣ ಸ್ಥಳದಿಂದ ಓಡಿ ಹೋಗಿ ಪ್ರಾಣಾಪಾಯದಿಂದಪಾರಾಗಿದ್ದಾರೆ.

ಆದರೆ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಗೋಣಿಕೊಪ್ಪಲಿನ ಲೋಪಾಮುದ್ರಾ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಾದ ಎಸಿಎಫ್ ಲಕ್ಷ್ಮಿಕಾಂತ್, ಆರ್‌ಎಫ್‌ಓ ದೇವರಾಜ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಹಾಜರಾಗಿದ್ದರು. ಕಾಡಾನೆ ದಾಳಿಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಕಾಡಾನೆ ಹಾವಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಘಟನೆಯ ಕುರಿತು ತಿತಿಮತಿ ಅರಣ್ಯ ವಲಯದ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಮತ್ತೊಮ್ಮೆ ಶೇ.50 ರಿಯಾಯಿತಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…

3 mins ago

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಫೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ…

15 mins ago

ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ…

1 hour ago

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ…

2 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ ಕೊನೆಗೂ ರಾಜೀನಾಮೆ ಅಂಗೀಕಾರ

ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.…

4 hours ago

ಚಿರತೆ ದಾಳಿಗೆ ಗರ್ಭಿಣಿ ಹೆಮ್ಮೆ ಬಲಿ ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ತಡರಾತ್ರಿ ನಡೆದ ದಾಳಿಯಲ್ಲಿ ಗರ್ಭಿಣಿ ಹೆಮ್ಮೆ ಸಾವನ್ನಪ್ಪಿದ…

4 hours ago