Rain Intensifies; Red Alert Issued
ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ನಿಗಧಿತ ಕ ೧೮.೫೦೦ ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಣೆ ಮಾಡುವ ವಾಹನಗಳು,ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರ್ಟಿಕ್ಯೂಲೇಟೆಡ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಕೆಲವು ವಾಹನಗಳಿಗೆ ವಿನಾಯಿತಿ:
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು, ಮಲ್ಟಿ ಆಕ್ಸಿಲ್ ಬಸ್ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಕುಶಾಲನಗರ ಮತ್ತು ಸಂಪಾಜೆಯಲ್ಲಿ ಚೆಕ್ಪೋಸ್ಟ್ ನಿರ್ಮಿಸಿ, ಸಿಬ್ಬಂದಿ ನಿಯೋಜಿಸಬೇಕು, ಮೊಬೈಲ್ ಪಟ್ರೋಲಿಂಗ್ ನಡೆಸಬೇಕು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…