ಕೊಡಗು

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮತ್ತಷ್ಟು ಕಟ್ಟೆಚ್ಚರ ವಹಿಸಿ: ಡಿಸಿ ವೆಂಕಟ್ ರಾಜಾ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ.

ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸೋಮವಾರ (ಆ.05) ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ. ನಿಂದ ಹಣ ಬಿಡುಗಡೆ ಮಾಡಲಾಗುವುದು. ಸರಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ. ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು

ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿರ್ದೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

1 hour ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

1 hour ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

1 hour ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

1 hour ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

1 hour ago