ಕೊಡಗು

ನಾಳಿನ ಬಂದ್‌ಗೆ ಕೊಡಗು ಜಿಲ್ಲಾ ಬಿಜೆಪಿ ಬೆಂಬಲ

ಕೊಡಗು: ವೀರ ಸೇನಾನಿಗಳನ್ನು ಅವಮಾನಿಸಿದ ವಿದ್ಯಾದರ್ ಗಡಿ ಪಾರಿಗೆ ಒತ್ತಾಯಿಸಿ ನಾಳೆ ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ.

ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ನಾಳೆ ಬಂದ್‌ಗೆ ಕರೆ ನೀಡಲಾಗಿದೆ.

ಕೊಡಗು ಸರ್ವ ಜನಾಂಗಗಳ ಒಕ್ಕೂಟದ ವತಿಯಿಂದ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್‌ಗೆ ಕರೆ ನೀಡಲಾಗಿದೆ.

ಈ ಮೂಲಕ ನಾಳೆ ಮಧ್ಯಾಹ್ನ 12ರವರೆಗೆ ಕೊಡಗು ಜಿಲ್ಲೆ ಸಂಪೂರ್ಣ ಸ್ತಬ್ಧವಾಗಲಿದ್ದು, ಎಲ್ಲರೂ ಬಂದ್‌ಗೆ ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ.

ಇನ್ನು ನಾಳಿನ ಬಂದ್‌ಗೆ ಕೊಡಗು ಜಿಲ್ಲಾ ಬಿಜೆಪಿ ಬೆಂಬಲ ನೀಡಿದ್ದು, ಬಂದ್‌ ಯಶಸ್ವಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೊಡಗು ಜಿಲ್ಲಾ ಬಿಜೆಪಿ, ಈ ಪ್ರಕರಣ ನಡೆದ ಕೂಡಲೇ ಮೊಕದ್ದಮೆ ದಾಖಲಿಸಿದ್ದೇವೆ. ಜಿಲ್ಲೆಯಲ್ಲಿ ಶಾಂತಿಯನ್ನು ಕದಡಲು ಇಂತಹ ಶಕ್ತಿಗಳಿಗೆ ಪೊಲೀಸ್‌ ಇಲಾಖೆ ಅವಕಾಶ ಕೊಡಬಾರದು. ಇದರ ಹಿಂದೆ ಯಾವ ಕಾಣದ ಕೈ ಕೆಲಸ ಮಾಡಿದೆ ಎಂಬುದನ್ನು ಯಾರ ಮುಲಾಜಿಗೂ ಒಳಗಾಗದೇ ತನಿಖೆ ನಡೆಸಿ ಸಮಾಜಕ್ಕೆ ನ್ಯಾಯವನ್ನು ಒದಗಿಸಬೇಕಾಗಿ ನಾವು ಒತ್ತಾಯಿಸುತ್ತಾ, ಈ ದೃಷ್ಟಿಯಿಂದ ನಾಳಿನ ಶಾಂತಿಯುವ ಬಂದ್‌ಗೆ ಬೆಂಬಲ ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

7 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

8 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

11 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago