ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದೆ.
ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ, ಕುಶಾಲನಗರ ಆಸ್ಪತ್ರೆಯ ಅಭಿವೃದ್ಧಿ, ಮಡಿಕೇರಿ- ದೋಣಿಗಲ್ ನಡುವೆ ಅಂತರಾಷ್ಟಿಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು, ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಮೀಸಲಿಟ್ಟಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಣ ಘೋಷಿಸಿರುವುದರಿಂದ ಕೊಡಗು ಜಿಲ್ಲೆಯ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆತಂತ್ತಾಗಿದೆ.
ಈ ಹಿಂದಿನ ಎಲ್ಲಾ ಬಜೆಟ್ ಗಳಿಗಿಂತ ಪ್ರಸ್ತುತ ವರ್ಷ ಮಂಡಿಸಿರುವ ಬಜೆಟ್ ವಿಭಿನ್ನವಾಗಿದ್ದು, ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಜಿಲ್ಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಲಾಭ ದೊರೆಯಲು ಶಾಸಕದ್ವಯರ ನಿರಂತರ ಪ್ರಯತ್ನದ ಫಲವೇ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…