ಕೊಡಗು

ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭ: ಎಂ.ಎನ್.ರವೂಫ್

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.

 

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದೆ.

ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ, ಕುಶಾಲನಗರ ಆಸ್ಪತ್ರೆಯ ಅಭಿವೃದ್ಧಿ, ಮಡಿಕೇರಿ- ದೋಣಿಗಲ್ ನಡುವೆ ಅಂತರಾಷ್ಟಿಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು, ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಮೀಸಲಿಟ್ಟಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಣ ಘೋಷಿಸಿರುವುದರಿಂದ ಕೊಡಗು ಜಿಲ್ಲೆಯ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆತಂತ್ತಾಗಿದೆ.

ಈ ಹಿಂದಿನ ಎಲ್ಲಾ ಬಜೆಟ್ ಗಳಿಗಿಂತ ಪ್ರಸ್ತುತ ವರ್ಷ ಮಂಡಿಸಿರುವ ಬಜೆಟ್ ವಿಭಿನ್ನವಾಗಿದ್ದು, ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಜಿಲ್ಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಲಾಭ ದೊರೆಯಲು ಶಾಸಕದ್ವಯರ ನಿರಂತರ ಪ್ರಯತ್ನದ ಫಲವೇ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

37 mins ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

40 mins ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

43 mins ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

45 mins ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

10 hours ago