ಕೊಡಗು

ಕೊಡಗು: ಮಾಧ್ಯಮ ಸಂವಾದದಲ್ಲಿ ಹತ್ತಾರು ಸಮಸ್ಯೆಗಳು

ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು.

ಕೊಡಗು ಪತ್ರತರ್ಕರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮಾಧ್ಯಮ ಸಂವಾದದಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಗಮನ ಸೆಳೆದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯತಿ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತಯಾರಾಗಿದೆ. ಗ್ರಾಪಂ ವ್ಯಾಪ್ತಿಯ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾ.ಪಂ ಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಇದಲ್ಲದೆ 29 ಇಲಾಖೆಗಳು ಕೂಡ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸುಂಟಿಕೊಪ್ಪದಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ಮಾರುಕಟ್ಟೆ ನಿರ್ಮಿಸಲಾಗುತ್ತಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆಯ ಜೊತೆಗೂಡಿ ರಸ್ತೆಯ ಒಂದು ಬದಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಹಿರಿಯರಾದ ಎಂ. ಎ. ವಸಂತ್ ಮಾತನಾಡಿ ವಿದ್ಯುತ್ ಅಡಚಣೆ, ನೀರಿನ ಸಮಸ್ಯೆಗಳಿಂದ ಬಡಾವಣೆ ಜನ ಪರದಾಡುವಂತಾಗಿದೆ. ಮುಂದಿನ ದಿನಗಳಲ್ಲಿ ತೊಂದರೆ ಎದುರಾದರೆ ಪಂಚಾಯಿತಿಯವರು ಕ್ರಮ ಕೈಗೊಳ್ಳಬೇಕು ಎಂದರು.

ಇದಕ್ಕೆ ಅಧ್ಯಕ್ಷ ಸುನಿಲ್ ಮಾತನಾಡಿ, ವಿದ್ಯುತ್ ಓವರ್ ಲೋಡ್ ಆಗಿ ಒಂದೇ ದಿನ ಮೂರು ಮೋಟಾರುಗಳು ಸುಟ್ಟು ಹೋಗಿವೆ. ಇದರಿಂದ ನೀರಿನ ಸಮಸ್ಯೆ ಉಂಟಾಗಿದೆ. ಆದರೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ ಎಂದರು.

ಹಿರಿಯರಾದ ಡಿ.ನರಸಿಂಹ ಮಾತನಾಡಿ, ಮುಖ್ಯ ರಸ್ತೆ ಎರಡು ಬದಿಯಲ್ಲಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಇದರಿಂದ ಹಾಡಿಹೋಕರಿಗೆ ತುಂಬಾ ತೊಂದರೆ ಉಂಟಾಗಿದೆ. ಮಾಂಸದಂಗಡಿಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಮಾಂಸ, ಮೀನು ಮಾರಾಟ ತಾಂತ್ರಿಕ ದೋಷದಿಂದ ಮಾಡಲಾಗುತ್ತಿದೆ. 11 ಅಂಗಡಿಗಳ ಮಾಲೀಕರು ಉಚ್ಚ ನ್ಯಾಯಾಲದಲ್ಲಿ ಸ್ಟೇ ತಂದಿದ್ದಾರೆ. ಮುಂದಿನ ಆರು ತಿಂಗಳಲ್ಲಿ ಪಂಚಾಯತ್ ಸ್ವಂತ ಮಳಿಗೆಗೆ ಸ್ಥಳಾಂತರ ಮಾಡಲಾಗುತ್ತದೆ. ಶುಚಿತ್ವ ಕಾಪಾಡಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಮಾಧ್ಯಮ ಸಂವಾದದಲ್ಲಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ಕ್ಷೇಮಾಭಿವೃದ್ಧಿ ಅಧ್ಯಕ್ಷ ಜಿ.ವಿ. ರವಿಕುಮಾರ್, ನಿರ್ದೇಶಕರಾದ ವಿಶುಕುಮಾರ್, ರಂಜಿತ್ ಕವಲಪಾರ, ಗುರುದರ್ಶನ್, ಲಕ್ಷ್ಮೀಶ್, ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಸೆಬಾಸ್ಟಿನ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಕಾಂಗ್ರೆಸ್ ಮುಖಂಡ ಯಂಕನ ಶ್ರೀರಾಮ್ ಸೇರಿದಂತೆ ಹಲವರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

38 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

45 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago