ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ ಚೇರ್ಗಳಿಂದ ಹೊಡೆದಾಡಿಕೊಂಡ ಘಟನೆ ತೀವ್ರ ಉದ್ರಿಕ್ತತೆ ಮೂಡಿಸಿತು. ಘಟನೆ ವಿರಾಜಪೇಟೆ ತಾಲ್ಲೂಕಿನ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಸಂದರ್ಭದಲ್ಲಿ ನಡೆದಿದೆ.
ಕಲ್ಲು ಬಾಯ್ಸ್ ಯುವಕರ ಸಂಘ ಆಯೋಜಿಸಿದ್ದ ಈ ಟೂರ್ನಿಯಲ್ಲಿ ಕಡಂಗ ತಂಡ ಮತ್ತು ಸುಂಟಿಕೊಪ್ಪ ತಂಡ ಭಾಗವಹಿಸಿದ್ದವು. ಸೆಮಿಫೈನಲ್ಸ್ ಪಂದ್ಯದ ವೇಳೆ ಎರಡೂ ತಂಡಗಳ ಅಭಿಮಾನಿಗಳ ನಡುವಿನ ಸಂಭ್ರಮಾಚರಣೆ ಹಂತದಲ್ಲಿ ಉದ್ವಿಗ್ನತೆ ಹೆಚ್ಚಿ, ತಕ್ಷಣವೇ ಗಲಾಟೆಯಾಗಿ ಮಾರ್ಪಟ್ಟಿತು. ಪರಸ್ಪರ ವಾಗ್ವಾದದಿಂದ ಶುರುವಾದ ವಿವಾದ ಚೇರ್ಗಳಿಂದ ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿತು.
ಇದನ್ನು ಓದಿ: ಸ್ನೇಹಿತರ ನಡುವೆ ಹೊಡೆದಾಟ: ಓರ್ವನ ಕೊಲೆಯಲ್ಲಿ ಅಂತ್ಯ
ಘಟನೆ ನಡೆದ ತಕ್ಷಣ ವಿರಾಜಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲವಾದರೂ, ಮೈದಾನದಲ್ಲಿ ಕೆಲವು ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಈ ಘಟನೆ ವಿರಾಜಪೇಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈದಾನದಲ್ಲಿ ಪಂದ್ಯಾವಳಿ ಮುಂದುವರೆದಿದ್ದು, ಆಯೋಜಕರು ಮತ್ತು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…