ಕೊಡಗು

ಕೊಡಗು| ಫುಟ್ಬಾಲ್ ಮ್ಯಾಚ್ ವೇಳೆ ಚೇರ್‌ನಲ್ಲಿ ಹೊಡೆದಾಡಿಕೊಂಡ ಅಭಿಮಾನಿಗಳು

ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ ಚೇರ್‌ಗಳಿಂದ ಹೊಡೆದಾಡಿಕೊಂಡ ಘಟನೆ ತೀವ್ರ ಉದ್ರಿಕ್ತತೆ ಮೂಡಿಸಿತು. ಘಟನೆ ವಿರಾಜಪೇಟೆ ತಾಲ್ಲೂಕಿನ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಸಂದರ್ಭದಲ್ಲಿ ನಡೆದಿದೆ.

ಕಲ್ಲು ಬಾಯ್ಸ್ ಯುವಕರ ಸಂಘ ಆಯೋಜಿಸಿದ್ದ ಈ ಟೂರ್ನಿಯಲ್ಲಿ ಕಡಂಗ ತಂಡ ಮತ್ತು ಸುಂಟಿಕೊಪ್ಪ ತಂಡ ಭಾಗವಹಿಸಿದ್ದವು. ಸೆಮಿಫೈನಲ್ಸ್ ಪಂದ್ಯದ ವೇಳೆ ಎರಡೂ ತಂಡಗಳ ಅಭಿಮಾನಿಗಳ ನಡುವಿನ ಸಂಭ್ರಮಾಚರಣೆ ಹಂತದಲ್ಲಿ ಉದ್ವಿಗ್ನತೆ ಹೆಚ್ಚಿ, ತಕ್ಷಣವೇ ಗಲಾಟೆಯಾಗಿ ಮಾರ್ಪಟ್ಟಿತು. ಪರಸ್ಪರ ವಾಗ್ವಾದದಿಂದ ಶುರುವಾದ ವಿವಾದ ಚೇರ್‌ಗಳಿಂದ ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿತು.

ಇದನ್ನು ಓದಿ: ಸ್ನೇಹಿತರ ನಡುವೆ ಹೊಡೆದಾಟ: ಓರ್ವನ ಕೊಲೆಯಲ್ಲಿ ಅಂತ್ಯ

ಘಟನೆ ನಡೆದ ತಕ್ಷಣ ವಿರಾಜಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಯಾವುದೇ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲವಾದರೂ, ಮೈದಾನದಲ್ಲಿ ಕೆಲವು ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆ ವಿರಾಜಪೇಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈದಾನದಲ್ಲಿ ಪಂದ್ಯಾವಳಿ ಮುಂದುವರೆದಿದ್ದು, ಆಯೋಜಕರು ಮತ್ತು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago