ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ.
ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ ಜಮೀನಿನಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬರ ಬಂದರೆ ಸಮಸ್ಯೆಯಾಗುತ್ತದೆ ಎಂದು ಭಾವಿಸಿದ ರೈತರು, ಬೆಳೆ ವಿಮೆ ಮಾಡಿಕೊಂಡಿದ್ದಾರೆ.
ಈ ಮೂಲಕ ಕೃಷಿ ಇಲಾಖೆ ಅಧಿಕಾರಿಗಳು ನಡೆಸಿದ ವ್ಯಾಪಕ ಪ್ರಚಾರದಿಂದಾಗಿ ಬೆಳೆ ವಿಮೆ 500ರ ಗಡಿ ದಾಟಿದೆ. ವಿವಿಧ ಜಿಲ್ಲೆಗಳಲ್ಲಿ ಬೆಳೆ ವಿಮೆ ಜನಪ್ರಿಯವಾಗುತ್ತಿತ್ತು. ಆದರೆ, ಕೊಡಗಿನಲ್ಲಿ ಮಾತ್ರ ಪ್ರತಿ ವರ್ಷವೂ ಬೆಳೆ ವಿಮೆಗೆ ರೈತರು ನಿರಾಸಕ್ತಿ ತೋರುತ್ತಿದ್ದರು.
ಆದರೆ ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ರೈತರೆಲ್ಲಾ ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭತ್ತ ಹಾಗೂ ಮುಸುಕಿನ ಜೋಳವನ್ನು ಅತಿಹೆಚ್ಚು ಬೆಳೆಯಲಾಗುತ್ತಿದ್ದು, ಈ ಬೆಳೆಗಳಿಗೆ ರೈತರೆಲ್ಲಾ ವಿಮೆ ಮಾಡಿಸಿದ್ದಾರೆ.
ಈ ಮೂಲಕ ಫಸಲು ನಷ್ಟವಾದರೆ ಸರ್ಕಾರದಿಂದ ಬೆಳೆಗೆ ಇಂತಿಷ್ಟು ಪರಿಹಾರ ಬರುತ್ತದೆ ಎಂದು ಅಂದಾಜಿಸಲಾಗಿದ್ದು, ಈ ಬಾರಿ ಮಳೆಯೂ ಕೂಡ ಉತ್ತಮವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…