ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ.
ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ ಜಮೀನಿನಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬರ ಬಂದರೆ ಸಮಸ್ಯೆಯಾಗುತ್ತದೆ ಎಂದು ಭಾವಿಸಿದ ರೈತರು, ಬೆಳೆ ವಿಮೆ ಮಾಡಿಕೊಂಡಿದ್ದಾರೆ.
ಈ ಮೂಲಕ ಕೃಷಿ ಇಲಾಖೆ ಅಧಿಕಾರಿಗಳು ನಡೆಸಿದ ವ್ಯಾಪಕ ಪ್ರಚಾರದಿಂದಾಗಿ ಬೆಳೆ ವಿಮೆ 500ರ ಗಡಿ ದಾಟಿದೆ. ವಿವಿಧ ಜಿಲ್ಲೆಗಳಲ್ಲಿ ಬೆಳೆ ವಿಮೆ ಜನಪ್ರಿಯವಾಗುತ್ತಿತ್ತು. ಆದರೆ, ಕೊಡಗಿನಲ್ಲಿ ಮಾತ್ರ ಪ್ರತಿ ವರ್ಷವೂ ಬೆಳೆ ವಿಮೆಗೆ ರೈತರು ನಿರಾಸಕ್ತಿ ತೋರುತ್ತಿದ್ದರು.
ಆದರೆ ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮ ರೈತರೆಲ್ಲಾ ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭತ್ತ ಹಾಗೂ ಮುಸುಕಿನ ಜೋಳವನ್ನು ಅತಿಹೆಚ್ಚು ಬೆಳೆಯಲಾಗುತ್ತಿದ್ದು, ಈ ಬೆಳೆಗಳಿಗೆ ರೈತರೆಲ್ಲಾ ವಿಮೆ ಮಾಡಿಸಿದ್ದಾರೆ.
ಈ ಮೂಲಕ ಫಸಲು ನಷ್ಟವಾದರೆ ಸರ್ಕಾರದಿಂದ ಬೆಳೆಗೆ ಇಂತಿಷ್ಟು ಪರಿಹಾರ ಬರುತ್ತದೆ ಎಂದು ಅಂದಾಜಿಸಲಾಗಿದ್ದು, ಈ ಬಾರಿ ಮಳೆಯೂ ಕೂಡ ಉತ್ತಮವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…