ಕೊಡಗು

ಕೊಡಗು: ಅಪ್ರಾಪ್ತ ಚಾಲಕರ ಪೋಷಕರಿಗೆ ದಂಡ

ಕೊಡಗು: ದ್ವಿಚಕ್ರ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಯುವಕರ ಪೋಷಕರಿಗೆ ಗೋಣಿಕೊಪ್ಪ ಪೋಲಿಸರು ದಂಡ ವಿಧಿಸಿದ್ದಾರೆ.

ಠಾಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಪಟ್ಟಣದಲ್ಲಿ ವಾಹನ ಮತ್ತು ಚಾಲಕರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದ್ದು ಅಪ್ರಾಪ್ತ ಯುವಕರನ್ನ ಎಚ್ಚರಿಸಿ, ಪೋಷಕರಿಗೆ ತಲಾ 25,000 ದಂಡ ವಿಧಿಸಿದ್ದಾರೆ.

ಮೂಲತಃ ಗೋಣಿಕೊಪ್ಪ ನಿವಾಸಿ ಮತ್ತು ಕೈಕೇರಿ ನಿವಾಸಿಗಳಾಗಿರುವ ಇಬ್ಬರು ಪೋಷಕರಿಗೆ ಎರಡು ಪ್ರಕರಣದ ಹಿನ್ನೆಲೆಯಲ್ಲಿ ಒಟ್ಟು 50 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ.

ಒಂದು ದ್ವಿಚಕ್ರ ವಾಹನದಲ್ಲಿ ಮೂವರು, ಮತ್ತೊಂದು ದ್ವಿಚಕ್ರದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಚಾಲನೆ ಮಾಡುತ್ತಿದ್ದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಠಾಣಾಧಿಕಾರಿ ಪ್ರದೀಪ್ ಕುಮಾರ್ ಅವರು, ಅಪ್ರಾಪ್ತ ಮಕ್ಕಳು ಒತ್ತಡ ಹಾಕುತ್ತಾರೆ ಎಂದು ಪೋಷಕರು ವಾಹನ ನೀಡಿ ಮತ್ತು ಚಾಲನೆಗೆ ಅವಕಾಶ ಕೊಡುವುದು, ಇಬ್ಬರಿಗಿಂತ ಅಧಿಕ ಮಂದಿ ವಾಹನ ಸವಾರಿ ಮಾಡುವುದು, ಪರವಾನಗಿ ಇಲ್ಲದೇ ವಾಹನ ಚಾಲನೆ ಕಾನೂನಿನಲ್ಲಿ ಅಪರಾಧ ಹೀಗೆ ವಾಹನ ಚಾಲನೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಲ್ಲಿ ಪೋಷಕರಿಗೆ 25,000 ನ್ಯಾಯಾಲಯದಲ್ಲಿ ದಂಡ ಹಾಗೂ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

21 mins ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

38 mins ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

43 mins ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

1 hour ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

2 hours ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

4 hours ago