ಕೊಡಗು: ದ್ವಿಚಕ್ರ ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಯುವಕರ ಪೋಷಕರಿಗೆ ಗೋಣಿಕೊಪ್ಪ ಪೋಲಿಸರು ದಂಡ ವಿಧಿಸಿದ್ದಾರೆ.
ಠಾಣಾಧಿಕಾರಿ ಪ್ರದೀಪ್ ಕುಮಾರ್ ಮತ್ತು ಸಿಬ್ಬಂದಿಗಳು ಪಟ್ಟಣದಲ್ಲಿ ವಾಹನ ಮತ್ತು ಚಾಲಕರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದ್ದು ಅಪ್ರಾಪ್ತ ಯುವಕರನ್ನ ಎಚ್ಚರಿಸಿ, ಪೋಷಕರಿಗೆ ತಲಾ 25,000 ದಂಡ ವಿಧಿಸಿದ್ದಾರೆ.
ಮೂಲತಃ ಗೋಣಿಕೊಪ್ಪ ನಿವಾಸಿ ಮತ್ತು ಕೈಕೇರಿ ನಿವಾಸಿಗಳಾಗಿರುವ ಇಬ್ಬರು ಪೋಷಕರಿಗೆ ಎರಡು ಪ್ರಕರಣದ ಹಿನ್ನೆಲೆಯಲ್ಲಿ ಒಟ್ಟು 50 ಸಾವಿರ ರೂಪಾಯಿಗಳ ದಂಡ ವಿಧಿಸಲಾಗಿದೆ.
ಒಂದು ದ್ವಿಚಕ್ರ ವಾಹನದಲ್ಲಿ ಮೂವರು, ಮತ್ತೊಂದು ದ್ವಿಚಕ್ರದಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಚಾಲನೆ ಮಾಡುತ್ತಿದ್ದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಠಾಣಾಧಿಕಾರಿ ಪ್ರದೀಪ್ ಕುಮಾರ್ ಅವರು, ಅಪ್ರಾಪ್ತ ಮಕ್ಕಳು ಒತ್ತಡ ಹಾಕುತ್ತಾರೆ ಎಂದು ಪೋಷಕರು ವಾಹನ ನೀಡಿ ಮತ್ತು ಚಾಲನೆಗೆ ಅವಕಾಶ ಕೊಡುವುದು, ಇಬ್ಬರಿಗಿಂತ ಅಧಿಕ ಮಂದಿ ವಾಹನ ಸವಾರಿ ಮಾಡುವುದು, ಪರವಾನಗಿ ಇಲ್ಲದೇ ವಾಹನ ಚಾಲನೆ ಕಾನೂನಿನಲ್ಲಿ ಅಪರಾಧ ಹೀಗೆ ವಾಹನ ಚಾಲನೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಲ್ಲಿ ಪೋಷಕರಿಗೆ 25,000 ನ್ಯಾಯಾಲಯದಲ್ಲಿ ದಂಡ ಹಾಗೂ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…