ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ಅರಣ್ಯ ರಕ್ಷಕರು ಇತರೆ ಸಿಬ್ಬಂದಿಗಳಾದ ಆರ್.ಆರ್.ಟಿ ತಂಡದ ದರ್ಶನ್, ಹರ್ಷಿತ್, ವಿನೋದ್ ಹಾಗೂ ಅರಣ್ಯ ರಕ್ಷಕರಾದ ಶ್ರೀಕಾಂತ್ ಅವರು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮದವೇರಿದ ಕಾಡಾನೆಯೊಂದು ಕೋವರ್ ಕೊಲ್ಲಿ ಟಾಟಾ ಎಸ್ಟೇಟ್ ಬಳಿಯಿದ್ದು, ಬೈಕ್ ಸವಾರರ ಕಡೆ ಧಾವಿಸಿದೆ. ಇದನ್ನರಿತ ಸವಾರರು ಬೈಕ್ ಬಿಟ್ಟು ಓಡಿದ್ದಾರೆ. ಆದರೆ ಇವರತ್ತಲೇ ಬಂದ ಕಾಡಾನೆ ಬೈಕ್ ಎಸೆದು, ಗುದ್ದಿ ಜಖಂಗೊಳಿಸಿದೆ.
ಬೇಸಿಗೆ ಸಮಯವಾದ ಕಾರಣ ಅರಣ್ಯದಲ್ಲಿ ಮೇವಿಗೆ ಕೊರತೆಯಾಗಿರುವ ಕಾರಣ ಮೇವು ಹಾಗೂ ನೀರನ್ನು ಅರಸಿಕೊಂಡು ಕಾಡಾನೆಗಳು ನಾಡಿನತ್ತ ಧಾವಿಸುತ್ತಿವೆ. ಹೀಗಾಗಿ ಯಾವಾಗ? ಎಲ್ಲಿ ಕಾಣಿಸಿಕೊಳ್ಳುತ್ತವೆ ಎನ್ನುವುದನ್ನು ಹೇಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಿಂದ ಸ್ಥಳೀಯರು ಭಯಬೀತರಾಗಿದ್ದು, ರಕ್ಷಣೆಗಾಗಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…