ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ಅರಣ್ಯ ರಕ್ಷಕರು ಇತರೆ ಸಿಬ್ಬಂದಿಗಳಾದ ಆರ್.ಆರ್.ಟಿ ತಂಡದ ದರ್ಶನ್, ಹರ್ಷಿತ್, ವಿನೋದ್ ಹಾಗೂ ಅರಣ್ಯ ರಕ್ಷಕರಾದ ಶ್ರೀಕಾಂತ್ ಅವರು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮದವೇರಿದ ಕಾಡಾನೆಯೊಂದು ಕೋವರ್ ಕೊಲ್ಲಿ ಟಾಟಾ ಎಸ್ಟೇಟ್ ಬಳಿಯಿದ್ದು, ಬೈಕ್ ಸವಾರರ ಕಡೆ ಧಾವಿಸಿದೆ. ಇದನ್ನರಿತ ಸವಾರರು ಬೈಕ್ ಬಿಟ್ಟು ಓಡಿದ್ದಾರೆ. ಆದರೆ ಇವರತ್ತಲೇ ಬಂದ ಕಾಡಾನೆ ಬೈಕ್ ಎಸೆದು, ಗುದ್ದಿ ಜಖಂಗೊಳಿಸಿದೆ.
ಬೇಸಿಗೆ ಸಮಯವಾದ ಕಾರಣ ಅರಣ್ಯದಲ್ಲಿ ಮೇವಿಗೆ ಕೊರತೆಯಾಗಿರುವ ಕಾರಣ ಮೇವು ಹಾಗೂ ನೀರನ್ನು ಅರಸಿಕೊಂಡು ಕಾಡಾನೆಗಳು ನಾಡಿನತ್ತ ಧಾವಿಸುತ್ತಿವೆ. ಹೀಗಾಗಿ ಯಾವಾಗ? ಎಲ್ಲಿ ಕಾಣಿಸಿಕೊಳ್ಳುತ್ತವೆ ಎನ್ನುವುದನ್ನು ಹೇಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಿಂದ ಸ್ಥಳೀಯರು ಭಯಬೀತರಾಗಿದ್ದು, ರಕ್ಷಣೆಗಾಗಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…