ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಅರಣ್ಯ ಪ್ರದೇಶದಲ್ಲಿ ಅರಣ್ಯ ರಕ್ಷಕರು ಇತರೆ ಸಿಬ್ಬಂದಿಗಳಾದ ಆರ್.ಆರ್.ಟಿ ತಂಡದ ದರ್ಶನ್, ಹರ್ಷಿತ್, ವಿನೋದ್ ಹಾಗೂ ಅರಣ್ಯ ರಕ್ಷಕರಾದ ಶ್ರೀಕಾಂತ್ ಅವರು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮದವೇರಿದ ಕಾಡಾನೆಯೊಂದು ಕೋವರ್ ಕೊಲ್ಲಿ ಟಾಟಾ ಎಸ್ಟೇಟ್ ಬಳಿಯಿದ್ದು, ಬೈಕ್ ಸವಾರರ ಕಡೆ ಧಾವಿಸಿದೆ. ಇದನ್ನರಿತ ಸವಾರರು ಬೈಕ್ ಬಿಟ್ಟು ಓಡಿದ್ದಾರೆ. ಆದರೆ ಇವರತ್ತಲೇ ಬಂದ ಕಾಡಾನೆ ಬೈಕ್ ಎಸೆದು, ಗುದ್ದಿ ಜಖಂಗೊಳಿಸಿದೆ.
ಬೇಸಿಗೆ ಸಮಯವಾದ ಕಾರಣ ಅರಣ್ಯದಲ್ಲಿ ಮೇವಿಗೆ ಕೊರತೆಯಾಗಿರುವ ಕಾರಣ ಮೇವು ಹಾಗೂ ನೀರನ್ನು ಅರಸಿಕೊಂಡು ಕಾಡಾನೆಗಳು ನಾಡಿನತ್ತ ಧಾವಿಸುತ್ತಿವೆ. ಹೀಗಾಗಿ ಯಾವಾಗ? ಎಲ್ಲಿ ಕಾಣಿಸಿಕೊಳ್ಳುತ್ತವೆ ಎನ್ನುವುದನ್ನು ಹೇಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಿಂದ ಸ್ಥಳೀಯರು ಭಯಬೀತರಾಗಿದ್ದು, ರಕ್ಷಣೆಗಾಗಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…