ಕೊಡಗು

ಕೊಡಗು: ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿ ಬೈಕ್ ಜಖಂ

ಕೊಡಗು: ಮದವೇರಿದ ಕಾಡಾನೆಯೊಂದು ಎಲ್ಲೆಂದರಲ್ಲಿ ಓಡಾಡಿದ್ದಲ್ಲದೆ, ಎದುಗಿಗೆ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಇದರ ಪರಿಣಾಮ ಅರಣ್ಯ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್‌ನ್ನು ಧ್ವಂಸ ಮಾಡಿರುವ ಘಟನೆ ಸೋಮವಾರಪೇಟೆ ಬಳಿಯ ಕಾಜೂರು ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಅರಣ್ಯ ಪ್ರದೇಶದಲ್ಲಿ ಅರಣ್ಯ ರಕ್ಷಕರು ಇತರೆ ಸಿಬ್ಬಂದಿಗಳಾದ ಆರ್.ಆರ್.ಟಿ ತಂಡದ ದರ್ಶನ್, ಹರ್ಷಿತ್, ವಿನೋದ್ ಹಾಗೂ ಅರಣ್ಯ ರಕ್ಷಕರಾದ ಶ್ರೀಕಾಂತ್‌ ಅವರು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮದವೇರಿದ ಕಾಡಾನೆಯೊಂದು ಕೋವರ್ ಕೊಲ್ಲಿ ಟಾಟಾ ಎಸ್ಟೇಟ್‌ ಬಳಿಯಿದ್ದು, ಬೈಕ್‌ ಸವಾರರ ಕಡೆ ಧಾವಿಸಿದೆ. ಇದನ್ನರಿತ ಸವಾರರು ಬೈಕ್ ಬಿಟ್ಟು ಓಡಿದ್ದಾರೆ. ಆದರೆ ಇವರತ್ತಲೇ ಬಂದ ಕಾಡಾನೆ ಬೈಕ್ ಎಸೆದು, ಗುದ್ದಿ ಜಖಂಗೊಳಿಸಿದೆ.

ಬೇಸಿಗೆ ಸಮಯವಾದ ಕಾರಣ ಅರಣ್ಯದಲ್ಲಿ ಮೇವಿಗೆ ಕೊರತೆಯಾಗಿರುವ ಕಾರಣ ಮೇವು ಹಾಗೂ ನೀರನ್ನು ಅರಸಿಕೊಂಡು ಕಾಡಾನೆಗಳು ನಾಡಿನತ್ತ ಧಾವಿಸುತ್ತಿವೆ. ಹೀಗಾಗಿ ಯಾವಾಗ? ಎಲ್ಲಿ ಕಾಣಿಸಿಕೊಳ್ಳುತ್ತವೆ ಎನ್ನುವುದನ್ನು ಹೇಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಿಂದ ಸ್ಥಳೀಯರು ಭಯಬೀತರಾಗಿದ್ದು, ರಕ್ಷಣೆಗಾಗಿ ಅರಣ್ಯ ಇಲಾಖೆಯ ಮೊರೆ ಹೋಗಿದ್ದಾರೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago