ಕೊಡಗು

ಓಣಂ ಸಂಭ್ರಮಕ್ಕೆ ಸಜ್ಜುಗೊಂಡ ಕೊಡಗು

ಮಡಿಕೇರಿ : ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ ನಡೆದಿದ್ದು, ಕೊಡಗು ಜಿಲ್ಲೆಯಲ್ಲೂ ಇಂದು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಓಣಂ ಆಚರಿಸಲಾಗುತ್ತಿದೆ.

ಓಣಂನ್ನು ವಿಶೇಷವಾಗಿ ಕೇರಳ ರಾಜ್ಯದಲ್ಲಿ ಸಡಗರ, ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬವು ೧೦ ದಿನಗಳ ಕಾಲ ನಡೆಯುತ್ತದೆ. ಹತ್ತನೆ ದಿನವನ್ನು ತಿರುಓಣಂ ಎಂದು ಕರೆಯಲಾಗುತ್ತದೆ. ಮಲಯಾಳಂ ಕ್ಯಾಲೆಂಡರ್‌ನ ಚಿಂಗಮ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ೧೦ ದಿನಗಳ ಕಾಲ ನಡೆಯುವ ಈ ಹಬ್ಬವು ವಿಶೇಷ ಮಹತ್ವವನ್ನು ಹೊಂದಿದ್ದು, ಈ ವರ್ಷ ಹಬ್ಬವು ಅಥಮ್‌ನೊಂದಿಗೆ ಪ್ರಾರಂಭವಾಗಿದೆ. ಅದರ ಪ್ರಮುಖ ಹಬ್ಬವಾದ ತಿರುವೋಣಂ ಅನ್ನು ಶುಕ್ರವಾರ ಆಚರಿಸಲಾಗುತ್ತಿದ್ದು, ಜನರು ಮಹಾಬಲಿಯನ್ನು ಸ್ವಾಗತಿಸಲು ಪುಷ್ಪ ರಂಗೋಲಿ ಹಾಕಿ ವಿವಿಧ ಭಕ್ಷ್ಯಗಳನ್ನು ತಯಾರಿಸಿ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

ಓಣಂ ಏಕೆ ವಿಶೇಷ?:
ರಾಜ ಮಹಾಬಲಿಯ ಪುನರಾಗಮನವನ್ನು ಸೂಚಿಸುವ ಈ ಹಬ್ಬವು ಪುರಾಣಗಳಲ್ಲಿ ಪ್ರಸಿದ್ಧಿ ಪಡೆದಿದೆ. ರಾಜ ಮಹಾಬಲಿ ತನ್ನ ಪ್ರಜೆಗಳನ್ನು ಭೇಟಿ ಮಾಡಲು ಭೂಮಿಗೆ ಹಿಂದಿರುಗುವುದನ್ನು ಸೂಚಿಸುವ ಹಬ್ಬ ಇದಾಗಿದ್ದು, ತನ್ನ ಆಳ್ವಿಕೆಯ ಕಾಲಾವಧಿಯಲ್ಲಿ ನ್ಯಾಯಯುತ ಮತ್ತು ಉದಾರ ಅರಸನಾಗಿದ್ದನೆಂದು ನಂಬಲಾಗಿದೆ.

ಮಹಾಬಲಿ ರಾಜನ ಆಳ್ವಿಕೆಯಲ್ಲಿ ಕೇರಳವು ಸಮೃದ್ಧವಾಗಿತ್ತು. ಅವನು ಹೆಚ್ಚು ಜನಪ್ರಿಯತೆಗಳಿಸುತ್ತಿದ್ದು ದೇವರಾಜ ಇಂದ್ರನನ್ನು ಅಸುರಕ್ಷಿತನನ್ನಾಗಿ ಮಾಡಿತು. ತನ್ನ ಕೀರ್ತಿಗೆ ದಕ್ಕೆಯಾಗುವುದನ್ನು ಅರಿತು ಇಂದ್ರನು ವಿಷ್ಣುವಿನಲ್ಲಿ ಸಹಾಯ ಬೇಡಿದನು. ಮಹಾ ವಿಷ್ಣು ವಾಮನ (ಕುಬ್ಜ ಬ್ರಾಹ್ಮಣ) ರೂಪವನ್ನು ತಾಳಿ ರಾಜ ಮಹಾಬಲಿಯಿಂದ ಮೂರು ಹೆಜ್ಜೆ ಭೂಮಿಯನ್ನು ದಾನವಾಗಿ ಕೇಳಿದನು. ಮಹಾಬಲಿ ಸಂತೋಷದಿಂದ ಈ ದಾನವನ್ನು ನೀಡಿದನು.

ಮೊದಲ ಹೆಜ್ಜೆಯಲ್ಲಿ, ವಾಮನನು ಇಡೀ ಭೂಮಿಯನ್ನು ಮತ್ತು ಎರಡನೇ ಹೆಜ್ಜೆಯಲ್ಲಿ ಇಡೀ ಆಕಾಶವನ್ನು ಅಳೆದನು. ಮೂರನೇ ಹೆಜ್ಜೆಗೆ ಸ್ಥಳವಿಲ್ಲದಿದ್ದಾಗ, ರಾಜ ಮಹಾಬಲಿ ತನ್ನ ತಲೆಯ ಮೇಲೆ ಪಾದವನ್ನು ಇಡುವಂತೆ ಹೇಳಿದನು. ರಾಜನ ಔದಾರ್ಯ ಮತ್ತು ಭಕ್ತಿಗೆ ಮೆಚ್ಚಿದ ವಿಷ್ಣು, ರಾಜನನ್ನು ಪಾತಾಳ ಲೋಕಕ್ಕೆ ಕಳುಹಿಸಿದನು. ಆದರೆ ವರ್ಷಕ್ಕೆ ಹತ್ತುದಿನಗಳ ಕಾಲ ತನ್ನ ಪ್ರಜೆಗಳನ್ನು ಭೇಟಿಯಾಗಲು ಭೂಮಿಗೆ ಹಿಂತಿರುಗುವ ವರವನ್ನು ನೀಡಿದನು. ಓಣಂ ದಿನದಂದು ಕೇರಳದ ಜನರು ತಮ್ಮ ರಾಜನನ್ನು ಸ್ವಾಗತಿಸಲು ತಯಾರಿ ನಡೆಸುವುದು ಇದೇ ಕಾರಣಕ್ಕೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago