ಕೊಡಗು

ಮತ್ತೆ ಭೂಕುಸಿತಕ್ಕೆ ಕಾರಣವಾಗುತ್ತಾ ಹಾರಂಗಿ ಜಲಾಶಯದ ಹೂಳು.?

ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು.

ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, ಹಮ್ಮಿಯಾಲ, ಮಕ್ಕಂದೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಹೀಗಾಗಿಯೇ ಆ ಹೂಳನ್ನು ತೆಗೆಯುವುದಕ್ಕಾಗಿ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ 131 ಕೋಟಿ ಹಣವನ್ನು ಬಜೆಟ್‌ನಲ್ಲಿಯೇ ಘೋಷಿಸಿತ್ತು. ಆದರೆ ಇಂದಿಗೂ ಹೂಳು ತೆಗೆಯಲು ಸಾಧ್ಯವೇ ಆಗಿಲ್ಲ.

ಆದರೆ ಈಗ ಹೂಳು ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಬರುವ ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಕಾರಣವಾಗುತ್ತಾ ಎನ್ನುವ ಆತಂಕ ಶುರುವಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಮಳೆ ಸುರಿಯುತ್ತಿದೆ. ಜಲಾಶಯಕ್ಕೆ ಮೂರು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಬಹುತೇಕ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಆದರೆ ನಿಜವಾಗಿಯೂ ಹೇಳಬೇಕೆಂದರೆ 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಬರೋಬ್ಬರಿ 1.5 ಟಿಎಂಸಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಅಂದರೆ ಜಲಾಶಯದಲ್ಲಿ ಇನ್ನು ಕೇವಲ 7 ಟಿಎಂಸಿ ನೀರು ಮಾತ್ರವೇ ಭರ್ತಿಯಾಗಲು ಅವಕಾಶವಿದೆ.

ಅಂದರೆ ಸಾಕಷ್ಟು ಮಳೆ ಬಂದಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದರೆ ಆ ನೀರನ್ನು ಜಲಾಶಯದಲ್ಲಿ ನಿಲ್ಲಿಸುವ ಬದಲು ಹಾಗೆಯೇ ನದಿಗೆ ಹರಿಸಬೇಕು. ಇಲ್ಲದಿದ್ದರೆ ಹಾರಂಗಿ ಜಲಾನಯನ ಪ್ರದೇಶದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿ ಭೂಕುಸಿತವಾಗುವ ಆತಂಕವಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

1 hour ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

2 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

2 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

2 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

3 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

3 hours ago