ಕೊಡಗು

ಮತ್ತೆ ಭೂಕುಸಿತಕ್ಕೆ ಕಾರಣವಾಗುತ್ತಾ ಹಾರಂಗಿ ಜಲಾಶಯದ ಹೂಳು.?

ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು.

ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, ಹಮ್ಮಿಯಾಲ, ಮಕ್ಕಂದೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಹೀಗಾಗಿಯೇ ಆ ಹೂಳನ್ನು ತೆಗೆಯುವುದಕ್ಕಾಗಿ 2019ರಲ್ಲಿ ಅಂದಿನ ಬಿಜೆಪಿ ಸರ್ಕಾರ 131 ಕೋಟಿ ಹಣವನ್ನು ಬಜೆಟ್‌ನಲ್ಲಿಯೇ ಘೋಷಿಸಿತ್ತು. ಆದರೆ ಇಂದಿಗೂ ಹೂಳು ತೆಗೆಯಲು ಸಾಧ್ಯವೇ ಆಗಿಲ್ಲ.

ಆದರೆ ಈಗ ಹೂಳು ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಬರುವ ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಕಾರಣವಾಗುತ್ತಾ ಎನ್ನುವ ಆತಂಕ ಶುರುವಾಗಿದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಮಳೆ ಸುರಿಯುತ್ತಿದೆ. ಜಲಾಶಯಕ್ಕೆ ಮೂರು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಬಹುತೇಕ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಆದರೆ ನಿಜವಾಗಿಯೂ ಹೇಳಬೇಕೆಂದರೆ 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಬರೋಬ್ಬರಿ 1.5 ಟಿಎಂಸಿ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದೆ. ಅಂದರೆ ಜಲಾಶಯದಲ್ಲಿ ಇನ್ನು ಕೇವಲ 7 ಟಿಎಂಸಿ ನೀರು ಮಾತ್ರವೇ ಭರ್ತಿಯಾಗಲು ಅವಕಾಶವಿದೆ.

ಅಂದರೆ ಸಾಕಷ್ಟು ಮಳೆ ಬಂದಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದರೆ ಆ ನೀರನ್ನು ಜಲಾಶಯದಲ್ಲಿ ನಿಲ್ಲಿಸುವ ಬದಲು ಹಾಗೆಯೇ ನದಿಗೆ ಹರಿಸಬೇಕು. ಇಲ್ಲದಿದ್ದರೆ ಹಾರಂಗಿ ಜಲಾನಯನ ಪ್ರದೇಶದ ಗ್ರಾಮಗಳಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿ ಭೂಕುಸಿತವಾಗುವ ಆತಂಕವಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago